Connect with us

DAKSHINA KANNADA

ಬಿಜೆಪಿ ನಾಯಕ ಪುತ್ತಿಲ ವಿರುದ್ಧ ಮಹಿಳಾ ಸಂತ್ರಸ್ಥೆಯಿಂದ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು..!

ಪುತ್ತೂರು :  ಪುತ್ತಿಲ ಪರಿವಾರದ ಸಂಸ್ಥಾಪಕ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಅತ್ಯಾಚಾರದ ಆರೋಪ ಮಾಡಿರುವ ಪುತ್ತೂರಿನ ಸಂತ್ರಸ್ಥೆ ಇದೀಗ ನ್ಯಾಯಕ್ಕಾಗಿ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.

 

 

 

ಅರುಣ್ ಕುಮಾರ್ ಪುತ್ತಿಲ ಅತ್ಯಾಚಾರ ಮಾಡಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಸಂತ್ರಸ್ಥೆ ದೂರಿದ್ದಾಳೆ. ದೂರು ನೀಡಲು ಬಂದಾಗ ದೂರು‌ ಸ್ವೀಕರಿಸಲು ತಡಮಾಡಿದ ಪುತ್ತೂರು ನಗರ ಮತ್ತು ಮಹಿಳಾ ಪೋಲೀಸ್ ಠಾಣೆ ವಿರುದ್ಧವೂ‌ ದೂರು ನೀಡಿದ್ದಾರೆ. ಅರುಣ್ ಪುತ್ತಿಲ ವಿರುದ್ಧ ದೂರು ನೀಡಲು ಮೂರು ದಿನಗಳ ಕಾಲ ಠಾಣೆಗೆ ಅಲೆದಿದ್ದೇನೆ. ಆದ್ರೆ ಪೋಲೀಸರು‌ ದೂರು‌ ಸ್ವೀಕರಿಸಿಲ್ಲ. ಸೆಪ್ಟೆಂಬರ್ 1 ರಂದು ಠಾಣೆಯ ಮುಂದೆ ಧರಣಿ‌ ನಡೆಸಿದ ಬಳಿಕ ದೂರು ಸ್ವೀಕರಿಸಿದ್ದಾರೆ. ಆದ್ರೆ ಅತ್ಯಾಚಾರ‌ ಪ್ರಕರಣ ದಾಖಲಿಸದೆ ಜಾಮೀನು ಮಂಜೂರಾಗುವ ಸೆಕ್ಷನ್ ಹಾಕಿದ್ದಾರೆ. ದೂರು ನೀಡಲು ಬಂದ ನನಗೆ ಬೆದರಿಕೆ ಕರೆಗಳೂ ಬರುತ್ತಿವೆ. ನನ್ನಂತೆ ಹಲವು ಮಹಿಳೆಯರಿಗೆ ಪುತ್ತಿಲರಿಂದ ಅನ್ಯಾಯವಾಗಿದೆ. ಆದ್ದರಿಂದ ನ್ಯಾಯಕೊಡಬೇಕೆಂದು ಸಂತ್ರಸ್ಥೆ ಮಾನವ ಹಕ್ಕುಗಳ ಆಯೋಗದ ಮೊರೆ ಹೋಗಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *