ಕೇರಳ, ಕೇರಳ 17: ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ರಾಜಕೀಯದ ವಿಷಯಗಳ ಬಗ್ಗೆ ಆಗಾಗ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಾರೆ. ಪ್ರಕಾಶ್ ರಾಜ್ ಅವರು ಒಂದಲ್ಲ ಒಂದು ವಿಷಯಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಕೇರಳ ಸಾಹಿತ್ಯ ಉತ್ಸವದ ವೇದಿಕೆಯಲ್ಲಿ ಪ್ರಕಾಶ್ ರಾಜ್ ಅವರು ಮಾತನಾಡಿದ್ದ ವಿಡಿಯೋ ವೈರಲ್ ಆಗಿದೆ. 
ಇತ್ತೀಚೆಗೆ ಅವರು ಸಿನಿಮಾ ಮಾಡೋದು ಕಡಿಮೆ ಆಗಿದೆ. ಆದರೆ, ವಿವಾದಗಳು ಕಡಿಮೆ ಆಗಿಲ್ಲ. ಒಬ್ಬಲ್ಲಾ ಒಬ್ಬರ ಭಾವನೆಗೆ ಧಕ್ಕೆ ತರುವ ಕೆಲಸ ಅವರಿಂದ ಆಗುತ್ತಲೇ ಇದೆ. ಈಗ ಅವರು ವಿವಾದಕ್ಕೆ ಗುರಿಯಾಗಿದ್ದಾರೆ. ರಾಮಾಯಣದ ಕಥೆಯನ್ನು ಬೇರೆ ರೀತಿಯಲ್ಲಿ ಹೇಳಿ ಕ್ರಿಮಿನಲ್ ಕೇಸ್ ಹಾಕಿಸಿಕೊಂಡಿದ್ದಾರೆ ಎಂದು ವರದಿ ಆಗಿದೆ.
ಪ್ರಕಾಶ್ ರಾಜ್ ಅವರು ವೇದಿಕೆ ಮೇಲೆ ಮಾತನಾಡುತ್ತಿದ್ದರು. ರಾಮ ಉತ್ತರ ಭಾರತದವನು ಹಾಗೂ ರಾವಣ ದಕ್ಷಿಣ ಭಾರತದ ಆದಿವಾಸಿ ಎಂದಿದ್ದರು ಪ್ರಕಾಶ್ ರಾಜ್. ರಾಮ ಹಣ್ಣನ್ನು ಕಿತ್ತು ತಿಂದಿದ್ದರಿಂದ ಇಬ್ಬರ ಮಧ್ಯೆ ಕಿತ್ತಾಟ ಶುರುವಾಯಿತು ಎಂದು ಹೇಳಿ ಚರ್ಚೆ ಹುಟ್ಟುಹಾಕಿದ್ದಾರೆ. ಈಗ ಪ್ರಕಾಶ್ ರಾಜ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ ಎಂದು ಹೇಳಲಾಗುತ್ತಾ ಇದೆ.
https://twitter.com/JaipurDialogues/status/2044725345778303397
ರಾಮ, ಲಕ್ಷ್ಮಣ ಹಾಗೂ ಸೀತೆ ದಕ್ಷಿಣ ಭಾರತಕ್ಕೆ ಬರುತ್ತಾರೆ. ಬಂದಾಗ ಲಕ್ಷ್ಮಣನಿಗೆ ಹಸಿವಾಗಿರುತ್ತದೆ. ಅಲ್ಲಿ ಹಣ್ಣಿನ ತೋಟ ಒಂದಿರುತ್ತದೆ. ಹೋಗಿ ಹಣ್ಣನ್ನು ತಿನ್ನೋಣ ಎಂದು ಲಕ್ಷ್ಮಣ ಹೇಳುತ್ತಾನೆ. ಎಲ್ಲರೂ ಹಣ್ಣು ತಿನ್ನುತ್ತಾರೆ. ಅಲ್ಲಿಗೆ ಬರುವ ಶೂರ್ಪನಖ, ಅಣ್ಣ ರಾವಣ ಯಾರೋ ಹಣ್ಣನ್ನು ತಿನ್ನುತ್ತಿದ್ದಾರೆ ಎನ್ನುತ್ತಾಳೆ. ಆಗ ರಾವಣ, ಅವರಿಗೆ ಹಸಿವಾಗಿದೆ ತಿನ್ನಲಿ ಎನ್ನುತ್ತಾನೆ’ ಎಂದು ಕಥೆ ಆರಂಭಿಸಿದ್ದಾರೆ ಪ್ರಕಾಶ್ ರಾಜ್.
‘ಆ ಬಳಿಕ ರಾವಣ ಹಣ ಕೇಳುತ್ತಾನೆ. ರಾಮ ಇಲ್ಲ ಎನ್ನುತ್ತಾನೆ. 20 ಪರ್ಸೆಂಟ್ ಡಿಸ್ಕೌಂಟ್ ಕೊಡ್ತೀನಿ ಎಂದು ರಾವಣ ಹೇಳುತ್ತಾನೆ. ಹಣವೇ ಇಲ್ಲ ಎಂದಮೇಲೆ ಡಿಸ್ಕೌಂಟ್ ಕೊಟ್ಟು ಏನು ಪ್ರಯೋಜನ? ಅದೇ ರೀತಿ, ಹಿಂದಿ ಹೇರಿಕೆ ಮಾಡಬೇಡಿ. ಇಲ್ಲಿ ಬಂದು ನೀವು ಮಲಯಾಳಂ ಕಲಿಯಿರಿ. ನಾವು ಬೀಫ್ ಫೆಸ್ಟ್ ಮಾಡುತ್ತೇವೆ’ ಎಂದಿದ್ದಾರೆ ಪ್ರಕಾಶ್ ರಾಜ್. ಈ ವಿಷಯಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲಾಗಿದೆ ಎಂದು ಹೇಳಲಾಗಿದೆ.