LATEST NEWS
ಇಂದಿರಾಗಾಂಧಿಯವರು ವಿಜಯಬ್ಯಾಂಕ್ ರಾಷ್ಟ್ರೀಕರಣ ಮಾಡಿದ ದಿನವೇ ಕರಾವಳಿಯಿಂದ ದೂರವಾಗಿದೆ – ಬಾಳಪ್ಪ ಶೆಟ್ಟಿ
ಇಂದಿರಾಗಾಂಧಿಯವರು ವಿಜಯಬ್ಯಾಂಕ್ ರಾಷ್ಟ್ರೀಕರಣ ಮಾಡಿದ ದಿನವೇ ಕರಾವಳಿಯಿಂದ ದೂರವಾಗಿದೆ – ಬಾಳಪ್ಪ ಶೆಟ್ಟಿ
ಮಂಗಳೂರು ಎಪ್ರಿಲ್ 9: ವಿಜಯ ಬ್ಯಾಂಕ್ ಕರಾವಳಿಯ ಹೆಮ್ಮೆಯ ಪ್ರತೀಕವಾಗಿತ್ತು. ಇಂತಹ ವಿಜಯ ಬ್ಯಾಂಕನ್ನು ಇಂದಿರಾ ಗಾಂಧಿ ನೇತ್ರತ್ವದ ಕಾಂಗ್ರೆಸ್ ಸರ್ಕಾರ ರಾಷ್ಟ್ರೀಕರಣ ಮಾಡುವ ಮೂಲಕ ಅದರ ಅಸ್ತಿತ್ವವನ್ನೇ ಕಿತ್ತು ಹಾಕಿತ್ತು.
ವಿಜಯ ಬ್ಯಾಂಕ್ ಯೂನಿಯನ್ ಮಾಜಿ ನಾಯಕರೆಂದು ಈಗ ಕರೆಸಿಕೊಳ್ಳುವವರು ಆಗ ಬ್ಯಾಂಕಿನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಬ್ಯಾಂಕ್ ರಾಷ್ಟ್ರೀಕರಣದ ಬಗ್ಗೆ ಅವರು ಚಕಾರ ಶಬ್ದ ಎತ್ತಿಲ್ಲ. ವಿಜಯ ಬ್ಯಾಂಕ್ ರಾಷ್ಟ್ರೀಕರಣವಾದ ದಿನವೇ ಕರಾವಳಿಯಿಂದ ದೂರವಾಗಿದೆ.
ಆಗ ಮಾತನಾಡದ ನಾಯಕರು ಈಗ ಸ್ವಂತದ ಲಾಭಕ್ಕಾಗಿ ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.
ಕೇಂದ್ರದಲ್ಲಿ ಕಾಂಗ್ರೆಸ್ ನೇತ್ರತ್ವದ ಯುಪಿಎ ಸರ್ಕಾರ ಇದ್ದಾಗ ಬ್ಯಾಂಕ್ಗಳ ವಿಲೀನ ಪ್ರಕ್ರಿಯೆ ಆರಂಭಿಸಿತ್ತು ಎನ್ನುವುದು ಎಲ್ಲರಿಗೂ ತಿಳಿದ ವಿಚಾರ. ಅದೇ ಸಂದರ್ಭ ವಿಜಯ ಬ್ಯಾಂಕ್ ವಿಲೀನದ ಪ್ರಸ್ತಾವನೆ ನಡೆದಿತ್ತು.
ಕರಾವಳಿಯ ಕಾಂಗ್ರೆಸ್ ನಾಯಕರಾದ ಅಸ್ಕರ್ ಫೆರ್ನಾಂಡಿಸ್, ವೀರಪ್ಪ ಮೊಯ್ಲಿ ಆಗ ಕೇಂದ್ರದಲ್ಲಿ ಸಚಿವರಾಗಿದ್ದರು. ಈ ನಾಯಕರು ವಿಲೀನ ಪ್ರಕ್ರಿಯೆ ಯಾವುದೇ ವಿರೋಧ ವ್ಯಕ್ತ ಪಡಿಸಿರಲಿಲ್ಲ. ಈ ವಿಲೀನ ಪ್ರಕ್ರಿಯೆ ನಡೆದ ಬಳಿಕ ಕೇವನ ಬಿಜೆಪಿ ಸಂಸದರನ್ನು ದೂರುತ್ತಿರುವ ಉದ್ದೇಶ ಏನೆಂದು ಅವರು ಪ್ರಶ್ನಿಸಿದ್ದಾರೆ.
ಸುಂದರ ರಾಮ ಶೆಟ್ಟಿ ಅವರಂತಹ ಮಹಾನ್ ನಾಯಕರಿಗೆ ಅವಮಾನವಾದಾಗ ಮಾತನಾಡದ ಈ ತಥಾಕಥಿತ ನಾಯಕರಿಗೆ ಈಗ ವಿಲೀನದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ.
ವಿವಾದ ಬಗೆಹರಿಸಲು ಸತ್ಯ ಶೋಧನಾ ಸಮಿತಿ ನೇಮಿಸಿದ ಆಗಿನ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಯಾವುದೇ ಕ್ರಮ ಕೈಗೊಳ್ಳದೆ ಸುಂದರ ರಾಮ ಶೆಟ್ಟಿ ಅವರ ಅಭಿಮಾನಿಗಳನ್ನು ವಂಚಿಸಿದ್ದರು.
ಈ ನಾಯಕರಿಗೆ ಕಾಂಗ್ರೆಸ್ನವನ್ನು ಪ್ರಶ್ನಿಸಲು ಧೈರ್ಯವಿಲ್ಲ. ಬದಲಾಗಿ ಹಾದಿ ತಪ್ಪಿಸುವ ಹೇಳಿಕೆ ನೀಡುವ ಮೂಲಕ ಜನರನ್ನು ವಂಚಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
You must be logged in to post a comment Login