Connect with us

    KARNATAKA

    ಊಟ ಮುಗಿಸಿ ರಸ್ತೆಯ ಡಿವೈಡರ್ ಮೇಲೆ ಹರಟೆ ಹೊಡೆಯುತ್ತಿದ್ದ ಯುವಕರ ಮೇಲೆ ಹರಿದ ಟ್ರಕ್ – ನಾಲ್ವರ ಧಾರುಣ ಸಾವು

    ವಿಜಯಪುರ ಅಕ್ಟೋಬರ್ 18: ಸರ್ವಿಸ್ ರಸ್ತೆಯ ಡಿವೈಡರ್ ಮೇಲೆ ಕುಳಿತು ಮಾತನಾಡುತ್ತಿದ್ದ ಯುವಕರ ಮೇಲೆ ಟ್ರಕ್ ಒಂದು ಹರಿದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವಿಗೀಡಾಗಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ಟೋಲ್ ಗೇಟ್ ಬಳಿ ನಡೆದಿದೆ.


    ಮೃತರನ್ನು ಜಯಪುರ ನಗರದ ವಜ್ರ ಹನುಮಾನ್ ನಗರ ನಿವಾಸಿಗಳಾದ ಶಿವಾನಂದ ಚೌಧರಿ (25), ಸುನೀಲ್ (26), ಈರಣ್ಣ (26) ಮತ್ತು 40 ವರ್ಷದ ಪ್ರವೀಣ್ ಪಾಟೀಲ್ ಎಂದು ಗುರುತಿಸಲಾಗಿದೆ. ಅಪಘಾತದ ಬಳಿಕ ಟ್ರಕ್ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ. ಹಿಟ್ನಳ್ಳಿ ಟೋಲ್ ಪ್ಲಾಜಾ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ.

    ನಾಲ್ಕು ಮಂದಿ ಯುವಕರ ಟೋಲ್ ಪ್ಲಾಜಾ ಸಮೀಪದ ಹೊಟೇಲ್ ಒಂದರಲ್ಲಿ ಊಟ ಮುಗಿಸಿ ಡಿವೈಡರ್ ಮೇಲೆ ಕುಳಿತು ಮಾತನಾಡುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಟ್ರಕ್ ಚಾಲಕನ ನಿಯಂತ್ರಣ ಕಳೆದುಕೊಂಡು ನಾಲ್ವರ ಮೇಲೆ ಹರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಎರಡು ಬೈಕ್‌ಗಳು ಜಖಂಗೊಂಡಿವೆ. ಸಿಸಿಟಿವಿ ಕ್ಯಾಮೆರಾಗಳು ಈ ಘಟನೆಯನ್ನು ಸೆರೆ ಹಿಡಿದಿವೆ. ಹಿಟ್ ಅಂಡ್ ರನ್ ಪ್ರಕರಣದಲ್ಲಿ ಭಾಗಿಯಾಗಿರುವ ವಾಹನ ಮಹಾರಾಷ್ಟ್ರದ್ದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ವಿಜಯಪುರ ಗ್ರಾಮಾಂತರ ಪೊಲೀಸರು ಬೈಕ್ ಗಳ ನೋಂದಣಿ ಸಂಖ್ಯೆ ಪಡೆದು ಮೃತರ ವಿಳಾಸ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply