LATEST NEWS
ಪೆರ್ಣಂಕಿಲ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಲೋಕಾಯುಕ್ತ ಬಲೆಗೆ
ಉಡುಪಿ ಡಿಸೆಂಬರ್ 21: ಲಂಚ ಸ್ವೀಕರಿಸುತ್ತಿದ್ದಾಗ ಗ್ರಾಮ ಲೆಕ್ಕಾಧಿಕಾರಿಯೊಬ್ಬ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಪೆರ್ಣಂಕಿಲದಲ್ಲಿ ನಡೆದಿದೆ.
ಪೆರ್ಣಂಕಿಲದ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಎನ್.ಪಿ ಲೋಕಯುಕ್ತ ಬಲೆಗೆ ಬಿದ್ದ ಭ್ರಷ್ಟ. ಜಮೀನನ್ನು ಸಕ್ರಮ ಮಾಡಿಕೊಡುವುದಕ್ಕಾಗಿ ಹರೀಶ್ ಎನ್ ಪಿ 10 ಸಾವಿರ ಲಂಚ ಕೇಳಿದ್ದ, ಈ ಹಿನ್ನಲೆ ಹಣ ಬೇಡಿಕೆ ಇಟ್ಟ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರುದಾರ 10 ಸಾವಿರ ನೀಡುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಕಾರ್ಯಚರಣೆ ನಡೆಸಿ ಭ್ರಷ್ಟ ಅಧಿಕಾರಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಆರೋಪಿಯನ್ನು ಬಂಧಿಸಿ, ಲಂಚದ ಹಣವನ್ನು ಉಡುಪಿ ಲೋಕಾಯುಕ್ತ ಪೊಲೀಸರು ವಶಪಡಿಸಿಕೊಂಡಿದ್ದಾರೆ.
You must be logged in to post a comment Login