UDUPI
ಶಬರಿಮಲೆ ಸಂಪ್ರದಾಯ ಧಿಕ್ಕರಿಸಿ ಹೋಗುವುದು ಸರಿಯಲ್ಲ – ಪಲಿಮಾರು ವಿದ್ಯಾಧೀಶ ಶ್ರೀ
ಶಬರಿಮಲೆ ಸಂಪ್ರದಾಯ ಧಿಕ್ಕರಿಸಿ ಹೋಗುವುದು ಸರಿಯಲ್ಲ – ಪಲಿಮಾರು ವಿದ್ಯಾಧೀಶ ಶ್ರೀ
ಉಡುಪಿ ಜನವರಿ 2: ಶಬರಿಮಲೆ ವಿಚಾರದಲ್ಲಿ ಧಾರ್ಮಿಕ ಸಂವಿಧಾನದ ಉಲ್ಲಂಘನೆ ಮಾಡುವುದು ಸರಿಯಲ್ಲ ಎಂದು ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ಶ್ರೀ ಗಳು ಹೇಳಿದ್ದಾರೆ.
ಪ್ರತಿಯೊಂದು ಕ್ಷೇತ್ರಕ್ಕೆ ತನ್ನದೇ ಆದ ಶಿಷ್ಟಾಚಾರ ಇರುತ್ತದೆ. ಶಬರಿಮಲೆ ವಿಚಾರದಲ್ಲಿ ಚರ್ಚೆ- ಜಗಳಕ್ಕಿಂತ ಧಾರ್ಮಿಕ ಪ್ರೊಟೋಕಾಲ್ ಅನುಸರಿಸಿ ಎಂದು ಕರೆ ನೀಡಿದ್ದಾರೆ.
ದೇಶದ ರಾಷ್ಟ್ರಪತಿ, ಪ್ರಧಾನಿಗೂ ಒಂದು ಶಿಷ್ಟಾಚಾರ ಇದೆ. ಅದೇ ರೀತಿ ಶಬರಿಮಲೆಯಲ್ಲಿ ಒಂದು ಶಿಷ್ಟಾಚಾರ ಜಾರಿಯಲ್ಲಿದೆ. ಈ ಶಿಷ್ಟಾಚಾರವನ್ನು ಶಬರಿಮಲೆಯಲ್ಲಿ ಇಷ್ಟುವರ್ಷ ಒಪ್ಪಲಾಗಿದೆ. ಆದರೆ ಈಗ ಹೊರಗಿನವರು ಬಂದು ನಡೆಸಿಕೊಂಡು ಬಂದಿರುವ ಸಂಪ್ರದಾಯವನ್ನು ಆಕ್ಷೇಪಿಸುವುದು ಯಾಕೆ ಎಂದು ಶ್ರೀಗಳು ಪ್ರಶ್ನಿಸಿದ್ದಾರೆ.
ಶಬರಿಮಲೆಯಲ್ಲಿ ಹೆಣ್ಮಕ್ಕಳಿಗೆ ಬಹಿಷ್ಕಾರ ಹಾಕಿಲ್ಲ, ಆದರೆ ಮಹಿಳೆಯರಿಗೆ ನಿಗದಿತ ಅವಧಿ ನಿರ್ಧರಿಸಲಾಗಿದೆ. ಶಬರಿಮಲೆಗೆ ಭಕ್ತಿಯಿಂದ ಹೋದರೆ ಅಡ್ಡಿಯಿಲ್ಲ ಆದರೆ ದೇವಾಲಯದ ಸಂಪ್ರದಾಯ ಧಿಕ್ಕರಿಸಿ ಹೋಗುವುದು ನಮಗೆ ಇಷ್ಟವಾಗುತ್ತಿಲ್ಲ ಎಂದು ಹೇಳಿದರು.
ಸುಪ್ರೀಂ ಕೋರ್ಟ್ ತೀರ್ಪನ್ನು ನಾವು ಆಕ್ಷೇಪಿಸಲ್ಲ, ಆದರೆ ಸುಪ್ರೀಂಕೋರ್ಟ್ ತೀರ್ಪನ್ನು ಪರಾಮರ್ಶೆ ಮಾಡಲಿ, ಅಯ್ಯಪ್ಪ ಭಕ್ತರಿಗ ಸಮಸ್ಯೆ ಆಗದಂತೆ ಕೋರ್ಟ್ ತೀರ್ಮಾನಿಸಲಿ, ಅಲ್ಲದೆ ಕ್ಷೇತ್ರದ ಸಂಪ್ರದಾಯ ನಿಯಮಾವಳಿಗೆ ಅವಕಾಶ ಕೊಡಬೇಕಾಗಿ ವಿನಂತಿಸಿದರು.
Facebook Comments
You may like
ಪೆಟ್ರೋಲ್ ಬೆಲೆ ಏರಿಕೆ ವಿರುದ್ದ ಉಡುಪಿಯಲ್ಲಿ ವಿಭಿನ್ನ ರೀತಿಯ ಪ್ರತಿಭಟನೆ
ಟೈಂ ಕೀಪಿಂಗ್ ವಿಚಾರದಲ್ಲಿ ಖಾಸಗಿ ಬಸ್ ಚಾಲಕರ ಹೊಡೆದಾಟ – ಬಸ್ ವಶಕ್ಕೆ
ಸಾಸ್ತಾನ ಟೋಲ್ ವಿನಾಯಿತಿ ನೀಡಲು ಒಪ್ಪದ ನವಯುಗ ಸಂಸ್ಥೆ – ಗರಂ ಆದ ಸಂಸದೆ ಶೋಭಾ ಕರಂದ್ಲಾಜೆ
ನನ್ನ ಹೆಸರಲ್ಲೇ ರಾಮನಿದ್ದಾನೆ..ನಮ್ಮೂರಿನ ರಾಮಮಂದಿರಕ್ಕೆ ದೇಣಿಗೆ ನೀಡುತ್ತೆನೆ – ಸಿದ್ದರಾಮಯ್ಯ
ಸಾಸ್ತಾನ ನವಯುಗ ಟೋಲ್ ಗೇಟ್ ವಿರುದ್ದ ಸ್ಥಳೀಯರ ಬೃಹತ್ ಪ್ರತಿಭಟನಾ ಸಭೆ
ಮಂಗಳೂರಿಗೆ ಯೋಗಿ ಆದಿತ್ಯನಾಥ; ಪೇಜಾವರ ಶ್ರೀಗಳ ಭೇಟಿ
You must be logged in to post a comment Login