Connect with us

    KARNATAKA

    ಮಗ ರಾತ್ರಿ ಹೊತ್ತು ನಿದ್ದೆ ಮಾಡುವಂತೆ ಮಾಡಪ್ಪ- ವೈರಲ್‌ ಆಯ್ತು ಅಪ್ಪನ ಪತ್ರ

    ಚಿಕ್ಕಮಗಳೂರು, ಎಪ್ರಿಲ್ 01: ಭಕ್ತರು ಇತ್ತೀಚಿಗೆ ಕಾಣಿಕೆ ಹುಂಡಿಗಳಲ್ಲಿ ಚಿತ್ರ ವಿಚಿತ್ರವಾದ ಬೇಡಿಕೆಗಳನ್ನು ಹೊತ್ತ ಕಾಗದದ ಪತ್ರಗಳನ್ನು ಹಾಕಿ ಮನವಿ ಮಾಡಿಕೊಳ್ಳುವುದು ಸಮಾನ್ಯವಾಗಿದೆ. ಈ ನಡುವೆ ಚಿಕ್ಕಮಗಳೂರಿನಲ್ಲಿ ಭಕ್ತರೊಬ್ಬರು ಕಾಣಿಕೆ ಹುಂಡಿಯಲ್ಲಿ ಹಾಕಿರುವ ಬೇಡಿಕೆ ಪತ್ರ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.

    ಜಿಲ್ಲೆಯ ಕಳಸದಲ್ಲಿರುವ ಕಳಸೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪರಿವಾರ ದೇವರುಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆಯಿ ಈ ವೇಳೆಯಲ್ಲಿ, ಮಗನ ಇಡೀ ಬದುಕನ್ನೇ ಬದಲಿಸಪ್ಪಾ ಎಂದು ಪತ್ರ ಬರೆದು ಕಾಣಿಕೆ ಹುಂಡಿಗೆ ಹಾಕಿರುವ ಪತ್ರ ವೈರಲ್‌ ಆಗಿದೆ.

    ಲಕ್ಷ್ಮಣ, ಅಶ್ವಿನಿ ನಕ್ಷತ್ರ ಮೇಷ ರಾಶಿ ಈತನಿಗೆ ಬೇಗ ಕೆಲಸ ಸಿಗುವಂತೆ ಮಾಡು ತಂದೆ, ಆತನ ನೆಚ್ಚಿನ ಕೆಲಸ ಸಿಗಲಿ, ಮತ್ತು ಆತನ ಕುಡಿತದ ಚಟ ಬಿಡಿಸು, ಅದರ ಮೇಲೆ ಮನಸ್ಸು ಬರದಂತೆ ಮಾಡು ತಂದೆ. ಕೋಪ ಹೋಗಲಾಡಿಸು, ಚಂಚಲ ಸ್ವಭಾವ ಹೋಗಲಾಡಿಸು. ರಾತ್ರಿ ಹೊತ್ತು ನಿದ್ದೆ ಬರುವಂತೆ ಮಾಡು, ಭಯ ನಿವಾರಣೆ ಮಾಡಪ್ಪ, ಅವನ ಮನಸ್ಸಿಗೆ ಸುಖ, ಶಾಂತಿ ನೆಮ್ಮದಿ ನೀಡಪ್ಪ.

    ಸಂಸಾರದಲ್ಲಿ ಜವಾಬ್ದಾರಿ ಕೊಡಪ್ಪ, ಹೆಂಡತಿ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಮಾಡು,ಹೀಗೆ ತನ್ನ ಕೌಟಂಬಿಕ ಸಮಸ್ಯೆಗಳನ್ನು ಬರೆದು ಹುಂಡಿಗೆ ಹಾಕಿ ದೇವರಿಗೆ ಮನವಿ ಸಲ್ಲಿಸಿದ್ದಾರೆ ಭಕ್ತರೊಬ್ಬರು.

    Share Information
    Advertisement
    Click to comment

    You must be logged in to post a comment Login

    Leave a Reply