Connect with us

    LATEST NEWS

    ಸುಫಾರಿ ಕೊಟ್ಟು ಪತ್ನಿ ವಿಶಾಲ ಗಾಣಿಗ ಕೊಲೆ – ಪ್ರಮುಖ ಆರೋಪಿ ಪತಿ ರಾಮಕೃಷ್ಣ ಆರೆಸ್ಟ್…!!

    ಉಡುಪಿ : ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಉಡುಪಿ ಬ್ರಹ್ಮಾವರದ ವಿಶಾಲ ಗಾಣಿಗ ಕೊಲೆ ಪ್ರಕರಣವನ್ನು ಉಡುಪಿ ಪೊಲೀಸರು ಕೊನೆಗೂ ಬೇಧಿಸಿದ್ದು ಕೊಲೆಯ ಪ್ರಮುಖ ಸೂತ್ರಧಾರ ವಿಶಾಲ ಗಾಣಿಗರ ಪತಿ ರಾಮಕೃಷ್ಣನನ್ನು ಬಂಧಿಸಿದ್ದಾರೆ.


    ಇದೀಗ ಪೊಲೀಸ್ ಬಂಧನದಲ್ಲಿದ್ದ ರಾಮಕೃಷ್ಣನನ್ನು ಪೊಲೀಸರು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡಬೆಕೆಂದು ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರಿಂದ ಆರೋಪಿ ರಾಮಕೃಷ್ಣ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಮಾನ್ಯ ನ್ಯಾಯಾಲಯ ಆದೇಶ ನೀಡಿತು.


    ವಿದೇಶದಲ್ಲಿರುವ ಆರೋಪಿ ರಾಮಕೃಷ್ಣ ಬಾಡಿಗೆ ಹಂತಕರ ಮೂಲಕ ವಿಶಾಲ ಗಾಣಿಗಳ ಕೊಲೆಯನ್ನು ಮಾಡಿದ್ದು ಪೊಲೀಸ್ ತನಿಖೆಯಿಂದ ಸಾಬೀತಾಗಿತ್ತು.

    ಕೊಲೆಗೆ ಸುಪಾರಿ ಪಡೆದ ಆರೋಪಿಗಳಲ್ಲಿ ಓರ್ವನನ್ನು ಪೊಲೀಸ್ ತಂಡ ಉತ್ತರ ಪ್ರದೇಶದಲ್ಲಿ ಬಂಧಿಸಿದ್ದು ಉಡುಪಿಗೆ ಕರೆದುಕೊಂಡು ಬರಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದು ಇನ್ನೋರ್ವ ಹಂತಕ ತಲೆಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರಿಂದ ಶೋಧ ಕಾರ್ಯ ಮುಂದುವರೆದಿದೆ.

    ಬ್ರಹ್ಮಾವರ ಸಮೀಪದ ಉಪ್ಪಿನಕೋಟಿಯ ಬಳಿ ಇರುವ ಮಿಲನ ರೆಸಿಡೆನ್ಸಿಯಲ್ಲಿ ವಿಶಾಲ ಗಾಣಿಗ ಅವರನ್ನು ವೈಯರ್ ಮೂಲಕ ಕುತ್ತಿಗೆ ಬಿಗಿದು ಕೊಲೆ ಮಾಡಲಾಗಿತ್ತು, ಈ ಪ್ರಕರಣದ ಬೆನ್ನತ್ತಿದ್ದ ಪೊಲೀಸರು , ಪ್ರಕರಣ ಭೇದಿಸಲು 6 ತಂಡಗಳನ್ನು ರಚನೆ ಮಾಡಲಾಗಿತ್ತು.

    Share Information
    Advertisement
    Click to comment

    You must be logged in to post a comment Login

    Leave a Reply