DAKSHINA KANNADA
ಕೊರಗಜ್ಜ ದೈವ ಹೋಲುವ ವೇಷ ಧರಿಸಿ ಅವಮಾನ ಪ್ರಕರಣ – ಆರೋಪಿ ಮದುಮಗ ಉಮರುಲ್ಲಾ ಬಾಷಿತ್ ಬಂಧನ
ಪುತ್ತೂರು ಫೆಬ್ರವರಿ 04: ಮದುವೆ ಸಂದರ್ಭದಲ್ಲಿ ಕೊರಗಜ್ಜ ದೈವ ಹೋಲುವ ವೇಷ ಧರಿಸಿ ಅವಮಾನ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಮದುಮಗ ಉಮರುಲ್ಲಾ ಬಾಷಿತ್ ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳದ ಕೊಲ್ನಾಡು ಗ್ರಾಮದಲ್ಲಿ ನಡೆದಿದ್ದ ಮದುವೆ ಕಾರ್ಯಕ್ರಮದಲ್ಲಿ ಮದುಮಗ ಉಮರುಲ್ಲಾ ಬಾಷಿತ್ ಕೊರಗಜ್ಜನ ಹೋಲುವ ರೀತಿ ವೇಷ ಭೂಷಣ ಧರಿಸಿ ಕುಣಿದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಭಾರಿ ವಿರೋಧ ವ್ಯಕ್ತವಾಗಿತ್ತು. ಹಿಂದೂ ಹಾಗೂ ಮುಸ್ಲಿಂ ಎರಡು ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದ್ದ ಘಟನೆ ಬಗ್ಗೆ ವರ ಹಾಗೂ ಆತನ ಸ್ನೇಹಿತರ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮದುಮಗನ ಇಬ್ಬರು ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಪ್ರಮುಖ ಆರೋಪಿ ಮದುಮಗನನ್ನು ಕೇರಳದಲ್ಲಿ ಪೊಲೀಸರು ಬಂಧಿಸಿದ್ದಾರೆ.
You must be logged in to post a comment Login