Connect with us

    LATEST NEWS

    ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು ಇಬ್ಬರು ಸಾವು

    ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು ಇಬ್ಬರು ಸಾವು

    ಮಂಗಳೂರು ಫೆಬ್ರವರಿ 28: ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ತಡೆಗೊಡೆ ಬದಿಯ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

    ಮಂಗಳೂರಿನ ಕರಂಗಲಪಾಡಿಯಲ್ಲಿ ನಿರ್ಮಾಣದ ಹಂತದಲ್ಲಿರುವ ಬಹು ಮಹಡಿ ಕಟ್ಟಡ ಇದಾಗಿದ್ದು, ಕಟ್ಟಡ ಬದಿಯಲ್ಲಿ ನಿರ್ಮಿಸಲಾಗುತ್ತಿರುವ ತಡೆಗೊಡೆಯ ಮಣ್ಣು ಕುಸಿದು ಸ್ಥಳದಲ್ಲೇ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಮಣ್ಣುಪಾಲಾಗಿದ್ದಾರೆ.

    ನಾಲ್ವರು ಮಣ್ಣು ಕುಸಿತ ಸ್ಥಳದಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದ್ದು, ಮಣ್ಣು ಕುಸಿಯುತ್ತಿದ್ದಂತೆ ಇಬ್ಬರು ತಪ್ಪಿಸಿಕೊಂಡಿದ್ದಾರೆ. ಆದರೆ ಮತ್ತೆ ಇಬ್ಬರ ಮೇಲೆ ಒಂದೇ ಸಮನೆ ಮಣ್ಣು ಕುಸಿದಿದ್ದು, ಸ್ಥಳದಲ್ಲಿ ಸಾವನಪ್ಪಿದ್ದಾರೆ. ಅಗ್ನಿ ಶಾಮಕದಳದ ಸಿಬ್ಬಂದಿಗಳು ಮೃತದೇಹ ತೆಗೆಯಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.

    ಮೃತರನ್ನು ಬಾಗಲಕೋಟೆ ಮೂಲದ  ಭೀಮೇಶ್ ಮತ್ತು ಬಂಗಾಳ ನಿವಾಸಿ ಮಸ್ರಿಕುಲ್ ಎಂದು ಗುರುತಿಸಲಾಗಿದ್ದು ಹನಿಕುಲ್ ಎಂಬ ಇನ್ನೋರ್ವ ಕಾರ್ಮಿಕ ಗಾಯಗೊಂಡಿದ್ದು ಅವರನ್ನು ಯೇನಪೋಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ.

    Share Information
    Advertisement
    Click to comment

    You must be logged in to post a comment Login

    Leave a Reply