Connect with us

    LATEST NEWS

    ಮಂಗಳೂರು – ಉಗ್ರ ಸಂಘಟನೆ ಪರ ಗೋಡೆ ಬರಹ ತೀರ್ಥಹಳ್ಳಿಯ ಇಬ್ಬರ ಬಂಧನ

    ಮಂಗಳೂರು ಡಿಸೆಂಬರ್ 05: ಮಂಗಳೂರು ನಗರದಲ್ಲಿ ಇತ್ತೀಚೆಗೆ ಬಿಜೈ ಮತ್ತು ಕೋರ್ಟ್ ಸಮೀಪ ಗೋಡೆಗಳಲ್ಲಿ ಕಾಣಿಸಿಕೊಂಡ ಉಗ್ರರ ಪರ ಬರಹ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ತಿಳಿಸಿದ್ದಾರೆ.


    ಮಂಗಳೂರಿನಲ್ಲಿ ಈ ಕುರಿತಂತೆ ಮಾಹಿತಿ ನೀಡಿದ ಅವರು ಬಂಧಿತ ಆರೋಪಿಗಳು ತೀರ್ಥಹಳ್ಳಿ ನಿವಾಸಿಗಳಾದ ಮಹಮ್ಮದ್ ಶಾರೀಕ್ (22) ಮತ್ತು ಮಾಝ್ ಮುನೀರ್ ಅಹ್ಮದ್ (21) ಎಂದು ಗುರುತಿಸಲಾಗಿದ್ದು, ಆರೋಪಿಗಳಲ್ಲಿ ಮೊಹಮ್ಮದ್ ಶಾರೀಕ್ ನಗರದಲ್ಲಿ ಕಳೆದ ಅಕ್ಟೋಬರ್ ತಿಂಗಳಿನಿಂದ ಆನ್‌ಲೈನ್ ಫುಡ್ ಡೆಲಿವರಿ ಕೆಲಸ ಮಾಡಿಕೊಂಡಿದ್ದ ಎಂದು ಮಾಹಿತಿ ನೀಡಿದರು.


    ಈ ಇಬ್ಬರು ಆರೋಪಿಗಳು ನವೆಂಬರ್ 27ರಂದು ಬಿಜೈ ವಸತಿ ಸಮುಚ್ಚಯದ ಕಂಪೌಂಡ್ ಹಾಲ್ ಮತ್ತು ನವೆಂಬರ್ 29ರಂದು ಜಿಲ್ಲಾ ಕೋರ್ಟ್ ಸಮೀಪ ಬೈಕ್‌ನಲ್ಲಿ ಬಂದು ಉಗ್ರರ ಪರ ಬರಹ ಬರೆದಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply