KARNATAKA
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಬಾಂಬ್ ಸ್ಫೋಟ
ಬೆಂಗಳೂರು, ಮಾರ್ಚ್ 02: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ‘ಸಿಡಿ’ ಬಾಂಬ್ ಸ್ಫೋಟಗೊಂಡಿದ್ದು, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಪ್ರಕರಣವನ್ನು ಸಾಮಾಜಿಕ ಕಾರ್ಯಕರ್ತರೊಬ್ಬರು ಬಿಡುಗಡೆಮಾಡಿದ್ದಾರೆ.
ಸಾಮಾಜಿಕ ಕಾರ್ಯಕರ್ತ, ನಾಗರಿಕ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ, ಜಲ ಸಂಪನ್ಮೂಲ ಸಚಿವರ ರಾಸಲೀಲೆ ಸಿಡಿ ಬಿಡುಗಡೆ ಮಾಡಿದ್ದು, ಸಚಿವರ ವಿರುದ್ಧ ತನಿಖೆ ನಡೆಸುವಂತೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಸಚಿವ ರಮೇಶ್ ಜಾರಕಿಹೊಳಿ ಯುವತಿಯೊಂದಿಗೆ ಅಶ್ಲೀಲವಾಗಿ ಕಾಣಿಸಿಕೊಂಡಿರುವ ವಿಡಿಯೋ ಇದಾಗಿದ್ದು, ರಾಜ್ಯ ರಾಜಕಾರಣದಲ್ಲಿ ಈ ಸಿಡಿ ಪ್ರಕರಣ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಸಾಧ್ಯತೆಯಿದೆ.
You must be logged in to post a comment Login