DAKSHINA KANNADA
ಮಂಗಳೂರಿಗೆ ನೀರು ಸರಬರಾಜು ಮಾಡುವ ತುಂಬೆ ಡ್ಯಾಂ ಒಳ ಹರಿವು ಸ್ಥಗಿತ, ಮಹಾನಗರಕ್ಕೆ ತಟ್ಟಲಿದೆಯಾ ನೀರಿನ ಬಿಸಿ.!?
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ನಗರದ ಹಲವು ಕಡೆ ಕುಡಿಯುವ ನೀರಿನ ಅಸಮರ್ಪಕ ಪೂರೈಕೆಯಿಂದ ಸಮಸ್ಯೆ ಎದುರಾಗಿದೆ. ಈ ಮಧ್ಯೆ ನಗರಕ್ಕೆನೀರು ಪೂರೈಕೆ ಮಾಡುವ ನೇತ್ರಾವತಿ ನದಿಯ ತುಂಬೆ ಡ್ಯಾಂ ಗೆ ನೀರಿನ ಒಳಹರಿವು ಹೆಚ್ಚು ಕಡಿಮೆ ಸ್ಥಗಿತಗೊಂಡಿದೆ.
ಮಂಗಳೂರು : ಫೆಬ್ರವರಿ ಮೊದಲ ವಾರದಿಂದಲೇ ಕರಾವಳಿಯಲ್ಲಿ ತೀವ್ರಗೊಂಡ ಬಿಸಿಲಿನ ಝಳ ನೀರಿನ ಮೇಲೆ ಪರಿಣಾಮ ಬೀರಲಾರಂಭಿಸಿದ್ದು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಆತಂಕ ಹೆಚ್ಚಿಸಿದೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಈಗಾಗಲೇ ನಗರದ ಹಲವು ಕಡೆ ಕುಡಿಯುವ ನೀರಿನ ಅಸಮರ್ಪಕ ಪೂರೈಕೆಯಿಂದ ಸಮಸ್ಯೆ ಎದುರಾಗಿದೆ. ಈ ಮಧ್ಯೆ ನಗರಕ್ಕೆನೀರು ಪೂರೈಕೆ ಮಾಡುವ ನೇತ್ರಾವತಿ ನದಿಯ ತುಂಬೆ ಡ್ಯಾಂ ಗೆ ನೀರಿನ ಒಳಹರಿವು ಹೆಚ್ಚು ಕಡಿಮೆ ಸ್ಥಗಿತಗೊಂಡಿದೆ. ಈ ಹಿನ್ನೆಯಲ್ಲಿ ಮುಂಜಾಗೃತಾ ಕ್ರಮವಾಗಿ ತುಂಬೆ ಕಿಂಡಿ ಅಣೆಕಟ್ಟಿನ ಎಲ್ಲಾ ಗೇಟ್ಗಳನ್ನು ಬಂದ್ ಮಾಡಲಾಗಿದ್ದು, ಸದ್ಯ 6 ಮೀಟರ್ ನೀರು ಸಂಗ್ರಹವಿದೆ. ಈ ಮಧ್ಯೆ ಅಣೆಕಟ್ಟಿನ ಕೆಳಭಾಗದಿಂದ ನೀರೆತ್ತಲು ಕ್ರಮ ಕೈಗೊಳ್ಳಲಾಗಿದ್ದು ಪಂಪ್ ಅಳವಡಿಸಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪಾಲಿಕೆ ಆಯುಕ್ತರಾದ ಆನಂದ್ ಪರಿಶೀಲಿಸಿದ್ದಾರೆ.
You must be logged in to post a comment Login