Connect with us

    LATEST NEWS

    ಕಾರ್ಕಳ – ಕೈತೊಳೆಯುವ ವೇಳೆ ನೀರಿನ ಟ್ಯಾಂಕ್ ಒಡೆದು ಮಹಿಳೆ ಸಾವು

    ಕಾರ್ಕಳ ಜನವರಿ 31: ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮದಲ್ಲಿ ಊಟ ಮುಗಿಸಿ ಕೈ ತೊಳೆಯುವ ಸಂದರ್ಭ ಪಕ್ಕದಲ್ಲಿದ್ದ ಹಳೆಯ ನೀರಿನ ಟ್ಯಾಂಕ್ ಒಡೆದು ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಕಾರ್ಕಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ನಂದಳಿಕೆ ಎಂಬಲ್ಲಿ ಬುಧವಾರ ನಡೆದಿದೆ.


    ಮೃತ ಮಹಿಳೆಯನ್ನು ಶ್ರೀಲತಾ (50) ಎಂದು ಗುರುತಿಸಲಾಗಿದೆ.ಘಟನೆಯಲ್ಲಿ ಮಹಿಳೆಯ ಮಗಳು ಪೂಜಾ ಗಂಭೀರವಾಗಿ ಗಾಯಗೊಂಡು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಕಳ ತಾಲೂಕಿನ ನಂದಳಿಕೆ ಗ್ರಾಮದ ಮಹಮ್ಮಾಯಿ ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮದಲ್ಲಿ ಊಟ ಮಾಡಿದ ಬಳಿಕ ಕೈ ತೊಳೆಯುವ ಸಂದರ್ಭದಲ್ಲಿ ನೆಲದ ಮೇಲೆ ಇರುವ ಹಳೆಯ ನೀರಿನ ಟ್ಯಾಂಕ್ ನೀರಿನ ಭಾರ ತಾಳಲಾರದೆ ಒಡೆದಿದ್ದು ಘಟನೆ ಸಂಭವಿಸಿದೆ. ಒಡೆದ ರಭಸಕ್ಕೆ ನೀರು ಹಾಗೂ ಸಿಮೆಂಟ್ ಕಾಂಕ್ರೀಟ್ ಬ್ಲಾಕ್ ಹೊರಚಿಮ್ಮಿ ಕೈ ತೊಳೆಯುತ್ತಿದ್ದ ಅವರಿಗೆ ತಾಗಿ ಮೃತಪಟ್ಟರೆ, ಮಗಳು ಪೂಜಾಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಶ್ರೀಲತಾ ಅವರು ಬೆಳ್ಮಣ್ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷೆಯಾಗಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply