Connect with us

    KARNATAKA

    ನೇಹಾ ಹತ್ಯೆ ಆರೋಪಿಯ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಹಾಕುತ್ತೇವೆ : ಅಂಜುಮನ್ ಸಂಸ್ಥೆ ಘೋಷಣೆ..!

    ಹುಬ್ಭಳ್ಳಿ: ನೇಹಾ ಹತ್ಯೆಗೆ ನಾಡಿನಾದ್ಯಾಂತ ಖಂಡನೆಗಳು ವ್ಯಕ್ತವಾಗುತ್ತಿದ್ದು,  ಆರೋಪಿ ಫಯಾಜ್ ನನ್ನು ನಮ್ಮ ಕೈಗೆ ಕೊಡಿ ಅವನ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಹಾಕುತ್ತೇವೆ ಎಂದು ಅಂಜುಮಾನ್ ಸಂಸ್ಥೆ ಗುಡುಗಿದೆ.

    ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹತ್ಯೆಗೈದ ಆರೋಪಿ ಫಯಾಜ್​ನನ್ನು ಎನ್ ಕೌಂಟರ್ ಮಾಡುವಂತೆ ಆಗ್ರಹಗಳು ಹೆಚ್ಚಾಗುತ್ತಿದ್ದು, ರಾಜ್ಯಾದ್ಯಾಂತ ಆಕ್ರೋಶ, ಪ್ರತಿಭಟನೆಗಳು ನಡೆಯುತ್ತಿವೆ.  ಇಂತಹ ರಕ್ಕಸರನ್ನು ನೇರವಾಗಿ ನೇಣಿಗೆ ಹಾಕುವ ಕಾನೂನು ಜಾರಿಗೆ ತರಬೇಕೆಂಬ ಕೂಗುಗಳು ಕೇಳಿ ಬರುತ್ತಿವೆ.

     

    ಇನ್ನು ಈ ಘಟನೆಯನ್ನು ಹುಬ್ಬಳ್ಳಿಯ ಅಂಜುಮನ್ ಸಂಸ್ಥೆ ತೀವ್ರವಾಗಿ ಖಂಡಿಸಿದ್ದು ಆರೋಪಿಯನ್ನು ಎನ್‌ಕೌಂಟರ್ ಮಾಡುವಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಅಂಜುಮನ್ ಸಂಸ್ಥೆ ಮುಖ್ಯಸ್ಥ ಅಲ್ತಾಫ್, ನೇಹಾ ಹತ್ಯೆಯನ್ನು ನಾವು ಖಂಡಿಸುತ್ತೇವೆ. ಆರೋಪಿ ಫಯಾಜ್ ನನ್ನು ನಮ್ಮ ಕೈಗೆ ಕೊಡಿ ಅವನ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಹಾಕುತ್ತೇವೆ. ಫಯಾ‌ಜ್‌ನನ್ನು ಎನ್‌ಕೌಂಟರ್ ಮಾಡುವಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದೇವೆ. ಭಾರತೀಯ ಜನತಾ ಪಕ್ಷದವರು ಇದರಲ್ಲಿ ರಾಜಕೀಯ ಮಾಡಬಾರದು. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದೇವೆ. ಹುಬ್ಬಳ್ಳಿ ಚೆನ್ನಮ್ಮ ಸರ್ಕಲ್​​ನಲ್ಲಿ ಆರೋಪಿ ಎನ್​ಕೌಂಟರ್ ಮಾಡಬೇಕು ಎಂದು ಹೇಳಿದರು.

    Share Information
    Advertisement
    Click to comment

    You must be logged in to post a comment Login

    Leave a Reply