Connect with us

    BANTWAL

    ಬಾವಿ ಕಾಣೆಯಾಗಿದೆ ಎಂದು ದೂರು ನೀಡಿದ ಪಿಡಿಓ

    ಬಂಟ್ವಾಳ, ಮೇ 28: ಸೊತ್ತುಗಳು ಅಥವಾ ಮನುಷ್ಯರು ಕಾಣೆಯಾದರೆ ಪೊಲೀಸ್ ಠಾಣೆಗಳಲ್ಲಿ ದೂರು ನೀಡುವುದು ಸಾಮಾನ್ಯ ಆದರೆ ಪಿಡಿಓ ಒಬ್ಬರು ಬಾವಿ ನಾಪತ್ತೆಯಾಗಿದ್ದು, ಹುಡುಕಿ ಕೊಡಿ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಸಾಂಧರ್ಬಿಕ ಚಿತ್ರ

    ಈ ಘಟನೆ ನರಿಕೊಂಬು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿಯ ನೇಲ್ಯಡ್ಕ ಎಂಬಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನಿರ್ಮಿಸಿದ ಬಾವಿ ಕಾಣೆಯಾಗಿದ್ದು ಇದನ್ನು ಹುಡುಕಿಕೊಡುವಂತೆ ನರಿಕೊಂಬು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಿವಗೊಂಡಪ್ಪ ಬಿರಾದರ್ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನರಿಕೊಂಬು ಗ್ರಾಮದ ನೇಲ್ಯಡ್ಕ ನಿವಾಸಿ ದಯಾನಂದ ಪೂಜಾರಿ ಎಂಬವರು ಆ ಬಾವಿಯನ್ನು ಮಣ್ಣು ಹಾಕಿ ಮುಚ್ಚಿ ಅತಿಕ್ರಮಣ ಮಾಡಿದ್ದಾರೆ ಎಂದು ಪಿಡಿಒ ದೂರಿನಲ್ಲಿ ಆರೋಪಿಸಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply