BANTWAL
ವಿಟ್ಲ: ದೊಣ್ಣೆಯಿಂದ ಬಡಿದು ಒಡಹುಟ್ಟಿದ ಅಣ್ಣನ ಹತ್ಯೆ.!
ವಿಟ್ಲ, ಸೆಪ್ಟೆಂಬರ್ 14: ಜಾಗದ ವಿಚಾರವಾಗಿ ಹಲವು ಸಮಯದಿಂದ ನಡೆಯುತ್ತಿದ್ದ ಸಹೋದರರ ನಡುವಿನ ಜಗಳ ಕೊಲೆಯ ಮೂಲಕ ಅಂತ್ಯ ಕಂಡ ಘಟನೆ ವಿಟ್ಲದ ಕೊಡಂಗೆ ಬನಾರಿಯಲ್ಲಿ ನಡೆದಿದೆ.
ಬನಾರಿ ಕೊಡಂಗೆ ನಿವಾಸಿ ಗಣೇಶ್ (53) ಸಾವನ್ನಪ್ಪಿದ್ದ ಮೃತ ದುರ್ದೈವಿ. ಪದ್ಮನಾಭ (49) ಕೊಲೆ ಆರೋಪಿ. ಜಾಗದ ವಿಚಾರವಾಗಿ ಮನೆಯಲ್ಲಿ ಸಹೋದರರು ಕುಡಿದು ಆಗಿಂದಾಗ ಗಲಾಟೆ ಸಂಭವಿಸುತ್ತಿತ್ತು. ಒಂದು ತಿಂಗಳ ಹಿಂದೆ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಮಂಗಳವಾರ ರಾತ್ರಿಯೂ ಕೂಡಾ ಜೋರಾಗಿ ಕಲಹ ನಡೆದಿದೆ ಎನ್ನುವ ಮಾಹಿತಿ ಲಭಿಸಿದೆ. ಈ ಘಟನೆ ಬಗ್ಗೆ ವಿಟ್ಲ ಠಾಣೆಗೆ ದೂರು ಬಂದಿದೆ.
You must be logged in to post a comment Login