KARNATAKA
ಮಂಗಳೂರಿನಲ್ಲಿರುವುದು ತಾಲಿಬಾನ್ ಸರಕಾರವೇ……- ಸಿದ್ದರಾಮಯ್ಯ ಪ್ರಶ್ನೆ
ಮಂಗಳೂರು ಸೆಪ್ಟೆಂಬರ್ 28: ಮಂಗಳೂರಿನಲ್ಲಿ ಮರುಕಳಿಸುತ್ತಿರುವ ನೈತಿಕ ಪೊಲೀಸ್ ಗಿರಿ ಪ್ರಕರಣಗಳ ವಿರುದ್ದ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ಮಂಗಳೂರಿನಲ್ಲಿ ತಾಲಿಬಾನ್ ಸರಕಾರ ಇದೇಯಾ ಎಂದು ಪ್ರಶ್ನಿಸಿದ್ದಾರೆ.
ಸುರತ್ಕಲ್ ನಲ್ಲಿ ಮೆಡಿಕಲ್ ಕಾಲೇಜು ವಿಧ್ಯಾರ್ಥಿಗಳ ಮೇಲೆ ಹಿಂದೂ ಸಂಘಟನೆಗಳ ಕಾರ್ಯಕರ್ತರ ನೈತಿಕ ಪೊಲೀಸ್ ಗಿರಿ ಪ್ರಕರಣದ ಕುರಿತಂತೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಸನ್ಮಾನ್ಯ ಕರ್ನಾಟಕದ ಮುಖ್ಯಮಂತ್ರಿಗಳೇ , ಮಂಗಳೂರಿನಲ್ಲಿ ಇರುವುದು ಬಿಜೆಪಿ ಆಡಳಿತದ ಸರ್ಕಾರನಾ? ತಾಲಿಬಾನ್ಗಳದ್ದಾ? ಎಂದು ಪ್ರಶ್ನಿಸಿದ್ದಾರೆ.
ಮಂಗಳೂರಿನ ಸುರತ್ಕಲ್ ಬಳಿ ಕಾಲೇಜೊಂದರ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮಲ್ಪೆ ಬೀಚ್ ಗೆ ತಿರುಗಾಡಲು ಬಂದು ವಾಪಾಸಾಗುವ ವೇಳೆ ಸುರತ್ಕಲ್ ಟೋಲ್ ಗೇಟ್ ಬಳಿ ಸಂಘಟನೆಯೊಂದರ ಕಾರ್ಯಕರ್ತರು ಕಾರಿನಲ್ಲಿ ಎರಡು ಕೋಮಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಜೊತೆಯಾಗಿ ತೆರಳಿದ್ದಾರೆ ಎಂಬ ಮಾಹಿತಿಯ ಮೇರೆಗೆ ತಡೆದು ಪ್ರಶ್ನಿಸಿ, ನಿಂದಿಸಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಘಟನೆಗೆ ಸಂಬಂಧ ಈಗಾಗಲೇ ವಿದ್ಯಾರ್ಥಿ ಸವಿಯೊ ಟಿ ಅಲೋನ್ಸೊ (20) ಸಲ್ಲಿಸಿದ ದೂರಿನ ಆಧಾರದ ಮೇಲೆ, ಸುರತ್ಕಲ್ ಪೊಲೀಸರು ಐವರು ಬಂಧಿಸಿ ಅವರನ್ನು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದಾರೆ.
You must be logged in to post a comment Login