Connect with us

KARNATAKA

ರೇಸಿಂಗ್ ಚಾಂಪಿಯನ್ ಶಿಫ್ ನಲ್ಲಿ ಅಪಘಾತ – ಜೀವ ಕಳೆದುಕೊಂಡ 13 ವರ್ಷದ ಶ್ರೇಯಸ್ ಹರೀಶ್‌

ಬೆಂಗಳೂರು ಅಗಸ್ಟ್ 06 : ಬೈಕ್ ರೇಸಿಂಗ್ ನಲ್ಲಿ 13 ವರ್ಷದ ಬಾಲಕನೊಬ್ಬ ಸಾವನಪ್ಪಿದ ಘಟನೆ ಚೆನ್ನೈನ ಮದ್ರಾಸ್ ಇಂಟರ್‌ನ್ಯಾಶನಲ್ ಸರ್ಕ್ಯೂಟ್‌ನಲ್ಲಿ ಶನಿವಾರ ನಡೆದಿದೆ. ಮೃತ ಬಾಲಕನನ್ನು ಬೆಂಗಳೂರು ಮೂಲದ 13 ವರ್ಷದ ಕೊಪ್ಪರಂ ಶ್ರೇಯಸ್ ಹರೀಶ್‌ ಎಂದು ಗುರುತಿಸಲಾಗಿದೆ.


ಚೆನ್ನೈನಲ್ಲಿ ನಡೆದ ಎಂಆರ್‌ಎಫ್ ಎಂಎಂಎಸ್‌ಸಿ ಎಫ್‌ಎಂಎಸ್‌ಸಿಐ ಇಂಡಿಯನ್ ನ್ಯಾಷನಲ್ ಮೋಟಾರ್‌ಸೈಕಲ್ ರೇಸಿಂಗ್ ಚಾಂಪಿಯನ್‌ಶಿಪ್‌ನ ಮೂರನೇ ಸುತ್ತಿನಲ್ಲಿ ಟರ್ನ್-1 ನಿಂದ ನಿರ್ಗಮಿಸಿದ ಶ್ರೇಯಸ್ ತಿರುವಿನಲ್ಲಿ ಆಯತಪ್ಪಿ ಬೈಕ್ ಉರುಳಿದ್ದು, ಈ ವೇಳೆ ಆತನ ತಲೆಗೆ ಹಾಕಲಾಗಿದ್ದ ಹೆಲ್ಮೆಟ್ ಕಳಚಿಕೊಂಡಿತ್ತು. ಹಿಂದಿನಿಂದ ಬರುತ್ತಿದ್ದ ಇನ್ನೊಬ್ಬ ಸ್ಪರ್ಧಿಯ ಬೈಕ್ ಶ್ರೇಯಸ್ ಮೇಲೆ ಹರಿದು ಮುಂದೆ ಸಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ತಕ್ಷಣ ಸ್ಪರ್ಧೆಯನ್ನು ಸ್ಥಗಿತಗೊಳಿಸಿ, ಶ್ರೇಯಸ್‌ನನ್ನು ಅಂಬುಲೆನ್ಸ್‌ನಲ್ಲಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಶ್ರೇಯಸ್ ಆಸ್ಪತ್ರೆ ತಲುಪುವಷ್ಟರಲ್ಲಿ ಸಾವನ್ನಪ್ಪಿದ್ದಾನೆ ಎಂದು ವರದಿಗಳು ತಿಳಿಸಿವೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *