KARNATAKA
ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಬೇಕಿತ್ತಾ..?
ಬೆಂಗಳೂರು ಅಗಸ್ಟ್ 17: ಶಿವಮೊಗ್ಗದ ಮುಸ್ಲಿಮರ ಏರಿಯಾದಲ್ಲಿ ಸಾವರ್ಕರ್ ಪೋಟೋ ಏಕೆ ಹಾಕೋಕೆ ಹೋದರು ಎಂಬ ಸಿದ್ದರಾಮಯ್ಯ ಹೇಳಿಕೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ.
ಮಾಜಿ ಸಚಿವ ಈಶ್ವರಪ್ಪ ಅವರು ಶಿವಮೊಗ್ಗ ಘಟನೆಯನ್ನು ಖಂಡಿಸುವಾಗ ಇವತ್ತಿನ ಪರಿಸ್ಥಿತಿಗೆ ಸಿದ್ದರಾಮಯ್ಯ, ಡಿಕೆಶಿ ಕಾರಣ ಅಂತ ಈಶ್ವರಪ್ಪ ಟೀಕಿಸಿದ್ದರು. ಇದಕ್ಕೆ ತಿರುಗೇಟು ಕೊಟ್ಟ ಸಿದ್ದರಾಮಯ್ಯ, ಈ ಬಿಜೆಪಿಯವರಿಗೆ ಕಾಮಾಲೆ ರೋಗ ಬಂದಿದೆ. ಎಲ್ಲದಕ್ಕೂ ಕಾಂಗ್ರೆಸ್ ಕಾರಣ ಅನ್ನೋದು. ಸುಳ್ಳು ಹೇಳುವುದು, ಸುಳ್ಳು ಹಬ್ಬಿಸುವುದು. ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಹಾಕಿದ್ದಾರೆ. ಹಾಕಲಿ ಬೇಡ ಅನ್ನಲ್ಲ. ಆದ್ರೆ ಟಿಪ್ಪು ಫೋಟೋ ತೆಗೀತಾರೆ. ಹೀಗೆ ಮಾಡಿದ್ರೆ ಗಲಭೆ ಆಗಲ್ವಾ..? ತಪ್ಪು ಅವರು ಮಾಡಿ ಕಾಂಗ್ರೆಸ್ ಮೇಲೆ ಹಾಕ್ತಾರೆ. ಮಗೂನು ಚಿವುಟುತ್ತಾರೆ ತೊಟ್ಟಿಲು ತೂಗ್ತಾರೆ. ಘಟನೆಯಲ್ಲಿ ಎಸ್ಡಿಪಿಐ ಇದ್ದರೆ ಕ್ರಮ ತೆಗೆದುಕೊಳ್ಳಿ. ಸರ್ಕಾರ ನಿಮ್ಮದೇ ಇದೆ. ಎಸ್ಡಿಪಿಐ, ಪಿಎಫ್ಐ ಸಮರಸ್ಯ ಹಾಳು ಮಾಡುತ್ತಿದ್ದಾರೆ ಅಂತ ನಿಮ್ಮ ಬಳಿ ದಾಖಲೆ ಇದ್ರೆ ಕ್ರಮ ತೆಗೆದುಕೊಳ್ಳಿ ಅಂತ ಹೇಳಿದ್ದರು.
You must be logged in to post a comment Login