Connect with us

    LATEST NEWS

    ಮಂಗಳೂರು – ಪತಿಯನ್ನು ಬಸ್ ನಿಲ್ದಾಣದಲ್ಲೇ ಬಿಟ್ಟು ಪತ್ನಿ ಪರಾರಿ!

    ಮಂಗಳೂರು ಜೂನ್ 21: ಪತಿಯನ್ನು ಬಸ್ ಸ್ಟ್ಯಾಂಡ್ ನಲ್ಲಿ ಬಿಟ್ಟು ಪತ್ನಿ ಪರಾರಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


    ಪರಾರಿಯಾದವರನ್ನು ಶಿಲ್ಪಾ ಎಂದು ಗುರುತಿಸಲಾಗಿದ್ದು, ಇವರು ಪತಿಯೊಂದಿಗೆ ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದಿಂದ ಪಿಲಿಕುಳ ನಿಸರ್ಗಧಾಮಕ್ಕೆ ತೆರಳಲು ಬಂದಿದ್ದರು. ಮಂಗಳೂರು ಸರ್ವಿಸ್ ಬಸ್ ನಿಲ್ದಾಣದಲ್ಲಿ ಪಿಲಿಕುಳ ಬಸ್ ಹತ್ತುವ ಮೊದಲು ಶೌಚಾಲಯಕ್ಕೆ ಹೋಗಿ ಬರುವೆ ಎಂದು ಹೇಳಿ ಹೋಗಿದ್ದ ಶಿಲ್ಪಾ ಅಲ್ಲಿಂದ ತಪ್ಪಿಸಿಕೊಂಡು ಉಡುಪಿ ಬಸ್ ಹತ್ತಿ ಪರಾರಿಯಾಗಿದ್ದಾರೆ. ಪತಿ ಕೂಡಲೇ ಅವರು ತನ್ನ – ಶಿಲ್ಪಾ ಅವರ ಮೊಬೈಲ್‌ಗೆ ಕರೆ ಮಾಡಿದರೂ, ಆಕೆ ಉತ್ತರಿಸಲಿಲ್ಲ. ಅನಂತರ ಮೊಬೈಲ್ ಸ್ವಿಚ್ ಆಫ್ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

    ಶಿಲ್ಪಾ ಅವರು 5.2 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು, ಬಿಳಿ ಮತ್ತು ಕೆಂಪು ಬಣ್ಣದ ಚೂಡಿದಾರದ ಟಾಪ್ ಮತ್ತು ಹಸುರು ಬಣ್ಣದ ಪ್ಯಾಂಟ್ ಧರಿಸಿದ್ದರು. ಕನ್ನಡ ಭಾಷೆ ಮಾತನಾಡುತ್ತಾರೆ. ಅವರ ಬಗ್ಗೆ ಮಾಹಿತಿ ದೊರೆತವರು ಮಂಗಳೂರು: ದಕ್ಷಿಣ ಪೊಲೀಸ್ ಠಾಣೆ (0824-2220518) ಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply