DAKSHINA KANNADA
ಕುಕ್ಕೆ ಸುಬ್ರಹ್ಮಣ್ಯ ಐನೆಕಿದು ಶಾಲೆ ಬಳಿ ರಸ್ತೆ ದಾಟಿ ಆತಂಕ ಸೃಷ್ಟಿಸಿದ ಒಂಟಿಸಲಗ..!
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಐನೆಕಿದು ಶಾಲೆ ಬಳಿ ಒಂಟಿ ಸಲಗವೊಂದು ರಸ್ತೆ ದಾಟಿ ಆತಂಕ ಸೃಷ್ಟಿಸಿದೆ.
ಸುಬ್ರಹ್ಮಣ್ಯ-ಹರಿಹರ ಪಲ್ಲತ್ತಡ್ಕ ರಸ್ತೆಯ ಸಮೀಪ ಇರುವ ಈ ಐನೆಕಿದು ಶಾಲಾ ಪ್ರದೇಶವಾಗಿದ್ದು ಐನೆಕಿದು ಕಡೆಯಿಂದ ಕೋಟೆಗೆ ಸಂಪರ್ಕಿಸುವ ರಸ್ತೆಯನ್ನು ಕಾಡಾನೆ ದಾಟಿ ಹೋಗಿದ್ದು ಘಟನೆಯಿಂದ ಸ್ಥಳೀಯ ಜನತೆ ಭಯಭೀತರಾಗಿದ್ದಾರೆ. ಗ್ರಾಮೀಣ ಪ್ರದೇಶವಾಗಿರುವ ಇಲ್ಲಿ ಶಾಲೆ, ಹಾಲು ಹೀಗೆ ಎಲ್ಲದಕ್ಕೂ ಈ ರಸ್ತೆಯಲ್ಲೇ ಅವಲಂಬಿಸಿರುವುದರಿಂದ ಸಹಜವಾಗಿಯೇ ಯಾವ ಸಂದರ್ಭದಲ್ಲೂ ಆನೆ ದಾಳಿ ಮಾಡಬಹುದೆಂಬ ಭೀತಿ ಎದುರಾಗಿದೆ. ಕೆಳದ ವರ್ಷ ಇದೇ ಭಾಗದಲ್ಲಿ ಕಾಡಾನೆ ಇಬ್ಬರನ್ನು ಬಲಿ ಪಡೆದಿದ್ದು ಅರಣ್ಯ ಇಲಾಖೆ ಶೀಘ್ರವೇ ಈ ಬಗ್ಗೆ ಕ್ರಮಕ್ಕೆ ಮುಂದಾಗಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
You must be logged in to post a comment Login