Connect with us

BELTHANGADI

ಧರ್ಮಸ್ಥಳ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಣಿಸಿಕೊಂಡ ಕಾಡಾನೆ – ಓಡಿ ತಪ್ಪಿಸಿಕೊಂಡ ಶಾಲಾ ಮಕ್ಕಳು

ಬೆಳ್ತಂಗಡಿ ಜುಲೈ 28: ಕಾಡಾನೆಯೊಂದು ಧರ್ಮಸ್ಥಳ ಗ್ರಾಮದ ಬೊಳಿಯಾರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಗ್ಗೆ ಕಾಣಿಸಿಕೊಂಡು ಆತಂಕ ಸೃಷ್ಠಿಸಿದೆ.


ಕಾಡಾನೆಗಳು ಕಳೆದ ಕೆಲ ದಿನಗಳಿಂದ ಧರ್ಮಸ್ಥಳ ಸಮೀಪದ ಬೊಳಿಯಾರ್ ಬಳಿ ಕೃಷಿ ನಾಶಮಾಡುತ್ತಿದ್ದವು. ಇಂದು ಬೆಳಿಗ್ಗೆ ಒಂದು ಕಾಡಾನೆ ಬೊಳಿಯಾರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತ್ಯಕ್ಷವಾಗಿದೆ.
ರಸ್ತೆಗೆ ಕಾಡಾನೆ ಬಂದಿದ್ದು ರಸ್ತೆಯಲ್ಲಿ ಬಸ್ ಕಾಯುತ್ತಿದ್ದ ಮಕ್ಕಳು ಸಾರ್ವಜನಿಕರು ಓಡಿ ತಪ್ಪಿಸಿಕೊಂಡಿದ್ದಾರೆ. ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಈ ವೇಳೆ ರಸ್ತೆಯಲ್ಲಿ ಯಾವುದೇ ವಾಹನವೂ ಓಡಾಡುತ್ತಿರಲಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಕಳೆದ ಒಂದು ವಾರದಿಂದ ಇಲ್ಲಿ ಕಾಡಾನೆ ತಿರುಗಾಟ ನಡೆಸುತ್ತಿದ್ದು, ಜನರು ಭಯದಲ್ಲಿ ಬದುಕುತ್ತಿದ್ದಾರೆ. ಬಳಿಕ ಆನೆ ಕಾಡಿನತ್ತ ಸಂಚರಿಸಿದ್ದು, ಸ್ವಲ್ಪದರಲ್ಲೇ ಅಪಾಯ ತಪ್ಪಿದೆ

Share Information
Continue Reading
Advertisement
Click to comment

Leave a Reply

Your email address will not be published. Required fields are marked *