Connect with us

    KARNATAKA

    ಹಾಸನ: ಆಟೋ ಮೇಲೆ ಕಾಡಾನೆಗಳ ಹಿಂಡು ದಾಳಿ, ಮಹಿಳೆ,ಚಾಲಕ ಇಬ್ಬರು ಪ್ರಾಣಾಪಾಯದಿಂದ ಪಾರು..!

    ಹಾಸನ : ಬೆಳ್ಳಂಬೆಳಗ್ಗೆ ಕಾಡಾನೆಗಳ ಹಿಂಡು ದಾಳಿ ಮಾಡಿದ ಪರಿಣಾಮ ಆಟೋ ರಿಕ್ಷಾವೊಂದರ ಮೇಲೆ ದಾಳಿ ಮಾಡಿದ ಘಟನೆ  ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಗುಜ್ಜನಹಳ್ಳಿ ತಿರುವಿನ ಮಿಷನ್ ಕಾಡಿನ ಬಳಿ ನಡೆದಿದೆ.

    ಘಟನೆಯಲ್ಲಿ ಆಟೋ ಚಾಲಕ ಮತ್ತು ಪ್ರಯಾಣಿಕ ಮಹಿಳೆ ಪವಾಡ  ಸದೃಶ್ಯರಾಗಿ ಅಲ್ಪಸ್ವಲ್ಪಗಾಯಗಳೊಂದಿಗೆ ಪಾರಾಗಿದ್ದಾರೆ.  ಆಟೋ ಚಾಲಕ ಮೋಹನ್ ಅವರು ಮಹಿಳಾ ಪ್ರಯಾಣಿಕರೊಬ್ಬರನ್ನು ಕೂರಿಸಿಕೊಂಡು ಗುಜ್ಜನಹಳ್ಳಿ ಗ್ರಾಮದಿಂದ ಅರೇಹಳ್ಳಿಗೆ ಬರುವಂತಹ ಸಂದರ್ಭದಲ್ಲಿ 5 ಕಾಡಾನೆಗಳು ಮಿಷನ್ ಕಾಡಿನ ತಿರುವಿನ ಬಳಿ ಅಡ್ಡಬಂದಿವೆ.  ಈ ವೇಳೆ 2 ಕಾಡಾನೆಗಳು ಚಲಿಸುತ್ತಿದ್ದ ಆಟೋ ಮೇಲೆ ದಾಳಿ ಮಾಡಲು ಮುಂದಾದಾಗ ಚಾಲಕ ಮೋಹನ್ ಆಟೋ ಬಿಟ್ಟು ದೂರ ಓಡಿದ್ದಾರೆ. ಪ್ರಯಾಣಿಕ ಮಹಿಳೆ ಮಾತ್ರ ಆಟೋದಲ್ಲೇ ಬಾಕಿಯಾಗಿ ಪ್ರಾಣ ಭಯದಿಂದ ಕಿರುಚಾಡಲು ಪ್ರಾರಂಭಿಸಿದ್ದಾರೆ. ಇದರಿಂದ ಸಿಟ್ಟಿಗೆದ್ದ ಕಾಡಾನೆಗಳು ಆಟೋವನ್ನು ರಸ್ತೆಯಿಂದ ತಳ್ಳಿಕೊಂಡು ಚರಂಡಿ ಬಳಿ ದೂಡಿ ಹಾಕಿವೆ.  ಆಟೋ ಮುಂಭಾಗ ಜಖಂ ಆಗಿದೆ ಎಂದು ತಿಳಿದು ಬಂದಿದೆ. ಆಟೋದಲ್ಲಿ ಕಿರುಚಾಡುತ್ತಿದ್ದ ಒಂಟಿ ಮಹಿಳೆಯನ್ನು ಪಾರುಮಾಡಲು ತಾವೂ ಕೂಡ ಜೋರಾಗಿ ಕಿರುಚಿದ್ದರಿಂದ ಆನೆಗಳು ಅಲ್ಲಿಂದ ತೆರಳಿವೆ. ಘಟನೆಯಲ್ಲಿ ಮಹಿಳೆ ಶಿವಾನಿಯವರಿಗೆ ಗಾಯಗಳಾಗಿದ್ದು, ಇಂತಹ ಪ್ರಕರಣಗಳು ನಿರಂತರವಾಗಿ ಸಂಭವಿಸುತ್ತಿರುವುದರಿಂದ ಇಲಾಖೆ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿ ಬಡ ಆಟೋ ಚಾಲಕ ಮೋಹನ್ ಅವರಿಗೆ ಇಲಾಖೆ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply