Connect with us

    LATEST NEWS

    ಬಾಂಗ್ಲಾದೇಶದಲ್ಲಿ ವಿರೋಧ ಪಕ್ಷದ ನಾಯಕರ ಬಾಯ್ಕಾಟ್ ಇಂಡಿಯಾ ಅಭಿಯಾನ – ನಿಮ್ಮ ಪತ್ನಿಯರ ಬಳಿಯಿರುವ ಭಾರತದ ಸೀರೆಗಳನ್ನು ಸುಟ್ಟು ಹಾಕಿ ಎಂದ ಪ್ರಧಾನಿ

    ಢಾಕಾ ಎಪ್ರಿಲ್ 2: ಬಾಂಗ್ಲಾದೇಶದಲ್ಲಿ ಪ್ರತಿಪಕ್ಷಗಳ ನಾಯಕರ ಬಾಯ್ಕಾಟ್ ಇಂಡಿಯಾ ಅಭಿಯಾನಕ್ಕೆ ಜೋರಾಗಿ ನಡೆಯುತ್ತಿದ್ದು, ಇದಕ್ಕೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಸರಿಯಾಗೇ ತಿರುಗೇಟು ನೀಡಿದ್ದಾರೆ. ಬಾಂಗ್ಲಾದೇಶದಲ್ಲಿ ಭಾರತೀಯ ಉತ್ಪನ್ನಗಳ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಎನ್‌ಪಿ ನಾಯಕ ರುಹುಲ್ ಕಬೀರ್ ರಿಜ್ವಿ ತಮ್ಮ ಕಾಶ್ಮೀರಿ ಶಾಲನ್ನು ರಸ್ತೆಗೆ ಎಸೆದು ‘India out’ ಅಭಿಯಾನಕ್ಕೆ ಚಾಲನೆ ನೀಡಿದ್ದರು.


    ಈ ಕುರಿತಂತೆ ಆಡಳಿತಾರೂಢ ಅವಾಮಿ ಲೀಗ್​ನ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಹಸೀನಾ, ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಕರೆ ನೀಡಿದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್​ಪಿ) ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಿಮ್ಮ ಪತ್ನಿಯರು ಎಷ್ಟು ಭಾರತೀಯ ಸೀರೆಗಳನ್ನು ಹೊಂದಿಲ್ಲ?. ಮೊದಲು ನೀವು ಅವರಿಂದ ಸೀರೆಗಳನ್ನು ತೆಗೆದುಕೊಂಡು ಅವುಗಳನ್ನು ಸುಟ್ಟು ಹಾಕಿ. ಬಳಿಕ ಅಭಿಯಾನ ನಡೆಸಿ ಎಂದು ಸವಾಲು ಹಾಕಿದ್ದಾರೆ.

    ಬಿಎನ್​ಪಿ ಅಧಿಕಾರದಲ್ಲಿದ್ದಾಗ, ಸಚಿವರು ಹಾಗೂ ‌ಅವರ ಪತ್ನಿಯರು ಭಾರತ ಪ್ರವಾಸ ಮಾಡುತ್ತಿದ್ದರು. ಈ ವೇಳೆ ಅಲ್ಲಿ ಸೀರೆಗಳನ್ನು ಖರೀದಿಸಿ ಬಾಂಗ್ಲಾದಲ್ಲಿ ತಂದು ಮಾರಾಟ ಮಾಡುತ್ತಿದ್ದರು. ಇನ್ನು ಕೆಲವರು ಸೀರೆಗಳನ್ನು ಸಂಗ್ರಹಿಸಿ ಇಟ್ಟಿದ್ದಾರೆ. ಆದರೆ ಈಗ ಭಾರತ ವಿರೋಧಿ ಘೋಷಣೆ ಕೂಗುತ್ತಿದ್ದಾರೆ. ಭಾರತವನ್ನು ವಿರೋಧ ಮಾಡುವ ನಾಯಕರು ಭಾರತದಿಂದ ತರಿಸಲಾಗುತ್ತಿರುವ ಗರಂ ಮಸಾಲಾ, ಈರುಳ್ಳಿ, ಶುಂಠಿ, ಬೆಳ್ಳುಳ್ಳಿ ಸೇರಿದಂತೆ ಮಸಾಲೆ ಪದಾರ್ಥಗಳನ್ನು ತಮ್ಮ ಮನೆಗೆ ತರಬಾರದು ಎಂದು ಹೇಳಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply