DAKSHINA KANNADA
ಕಾಸರಗೋಡು – ಮಸೀದಿ ಸಮೀಪದ ಕೆರೆಯಲ್ಲಿ ಸ್ನಾನಕ್ಕಿಳಿದ ಇಬ್ಬರು ಮಕ್ಕಳು ಮುಳುಗಿ ಸಾವು

ಕಾಸರಗೋಡು ಮೇ 22: ಮಸೀದಿಯ ಕೆರೆಯಲ್ಲಿ ಸ್ನಾನಕ್ಕೆ ಇಳಿದ ಇಬ್ಬರು ಮಕ್ಕಳು ಮುಳುಗಿ ಸಾವನಪ್ಪಿದ ಘಟನೆ ಕಾಞಂಗಾಡ್ ನ ಮಾಣಿಕ್ಕೋತ್ ನಲ್ಲಿ ಇಂದು ಸಂಜೆ ನಡೆದಿದೆ.
ಮೃತರನ್ನು ಪಾಲೆಕ್ಕಿ ಅಝೀಝ್ ರವರ ಪುತ್ರ ಆಫಾಝ್(9) ಹಾಗೂ ಹೈದರ್ ರವರ ಪುತ್ರ ಅನ್ವರ್ (11) ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಮತ್ತೊರ್ವನ ಸ್ಥಿತಿ ಗಂಭೀರವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಸಂಜೆ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮಾಣಿಕ್ಕೋತ್ ಪಾಲೆಕ್ಕಿ ಮಸೀದಿಯ ಕೆರೆಯಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ಘಟನೆ ನಡೆದಿದೆ. ಮಾಹಿತಿ ತಿಳಿದು ನಾಗರಿಕರು, ಅಗ್ನಿಶಾಮಕ ದಳದ ಸಿಬ್ಬಂದಿಗಳು, ಪೊಲೀಸರು ಮಕ್ಕಳನ್ನು ಹೊರ ತೆಗೆದರೂ ಇಬ್ಬರು ಮೃತಪಟ್ಟಿದ್ದರು. ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.