Connect with us

    LATEST NEWS

    ಮಹಿಳಾ ಇನ್ಸಪೆಕ್ಟರ್ ಹೆಗಲಮೇಲೆ ಹೊತ್ತುಕೊಂಡು ಹೋಗಿ ರಕ್ಷಿಸಿದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

    ಚೆನ್ನೈ : ಮಹಿಳಾ ಪೊಲೀಸ್ ಇನ್ಸಪೆಕ್ಟರ್ ರಾಜೇಶ್ವರಿ ಅವರು ಭಾರೀ ಮಳೆಯ ನಡುವೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಯುವಕನನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಚಿಕಿತ್ಸೆ ನೀಡಿ ಸುದ್ದಿಯಾಗಿದ್ದರು, ಆದರೆ ಇದೀಗ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾನೆ.


    ಮೃತನನ್ನು ಉದಯ ಕುಮಾರ್(25) ಎಂದು ಗುರುತಿಸಲಾಗಿದ್ದು. ಸರ್ಕಾರಿ ಕಿಲ್ಪಾಕ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕೊನೆಯುಸಿರೆಳದಿದ್ದಾನೆ.

    ಎಡೆಬಿಡದೆ ಸುರಿದ ಮಳೆಗೆ ಮೈ ಮೇಲೆ ಮರ ಬಿದ್ದು ಯುವಕ ಪ್ರಜ್ಞಾಹೀನನಾಗಿದ್ದನು. ಈ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಲು ವ್ಯವಸ್ಥೆ ಮಾಡಿದ್ದ ಆಟೋರಿಕ್ಷಾ ಬಳಿಗೆ ಮಹಿಳಾ ಪೊಲೀಸ್ ಅಧಿಕಾರಿ ರಾಜೇಶ್ವರಿ ಅವರು ತನ್ನ ಹೆಗಲ ಮೇಲೆ ಹೊತ್ತು ಕೊಂಡು ಹೋಗಿದ್ದರು.
    ನಂತರ ಯುವಕನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವನಪ್ಪಿದ್ದಾನೆ. ಮಹಿಳಾ ಪೊಲೀಸ್ ಅಧಿಕಾರಿ ರಾಜೇಶ್ವರಿಯವರ ಮಳೆ ನಡುವೆ ಲೆಕ್ಕಿಸದೇ ಯುವಕ ಪ್ರಾಣ ಉಳಿಸಲು ಮಾಡಿರುವ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದ್ದು, ತಮಿಳುನಾಡು ಸಿಎಂ ಕೂಡ ರಾಜೇಶ್ವರಿಗೆ ಅಭಿನಂದನೆ ಸಲ್ಲಿಸಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply