LATEST NEWS
ಜನ್ಮದಿನದಂದು ದುಬೈಗೆ ಕರೆದುಕೊಂಡು ಹೋಗಲಿಲ್ಲ ಎಂದು ಗಂಡನಿಗೆ ಪಂಚ್ ಕೊಟ್ಟ ಹೆಂಡತಿ …ಗಂಡ ಖಾಲಿ
ಪುಣೆ ನವೆಂಬರ್ 25 :ಆಘಾತಕಾರಿ ಘಟನೆಯೊಂದರಲ್ಲಿ, ಹೆಂಡಿತಿಯೊಬ್ಬಳು ತನ್ನ ಗಂಡ ಜನ್ಮದಿನದಂದು ದುಬೈಗೆ ಕರೆದುಕೊಂಡು ಹೋಗಿಲ್ಲ ಎಂದು ಮುಖಕ್ಕೆ ಗುದ್ದಿ ಸಾಯಿಸಿದ ಘಟನೆ ಪುಣೆಯ ವನವಡಿ ಪ್ರದೇಶದ ಐಷಾರಾಮಿ ರೆಸಿಡೆನ್ಶಿಯಲ್ ಸೊಸೈಟಿಯಲ್ಲಿ ನಡೆದಿದೆ. ಹತ್ಯೆಗೀಡಾದ ವ್ಯಕ್ತಿಯನ್ನು ನಿಖಿಲ್ ಖನ್ನಾ ಎಂದು ಗುರುತಿಸಲಾಗಿದ್ದು, ಅವರು ನಿರ್ಮಾಣ ಉದ್ಯಮದಲ್ಲಿ ಉದ್ಯಮಿಯಾಗಿದ್ದರು. ಶುಕ್ರವಾರ ಈ ಘಟನೆ ನಡೆದಿದೆ.
ನಿಖಿಲ್ ಖನ್ನಾ ಆರು ವರ್ಷಗಳ ಹಿಂದೆ ರೇಣುಕಾ (38) ಅವರೊಂದಿಗೆ ಪ್ರೇಮ ವಿವಾಹವಾಗಿದ್ದರು. ಪೊಲೀಸ್ ಮಾಹಿತಿಗಳ ಪ್ರಕಾರ ಶುಕ್ರವಾರ ಮಧ್ಯಾಹ್ನ ಈ ಘಟನೆ ಸಂಭವಿಸಿದೆ, ಪ್ರಾಥಮಿಕ ತನಿಖೆಯ ಪ್ರಕಾರ, ರೇಣುಕಾ ತನ್ನ ಹುಟ್ಟುಹಬ್ಬವನ್ನು ಆಚರಿಸಲು ದುಬೈಗೆ ಕರೆದುಕೊಂಡು ಹೋಗಲು ಗಂಡನ ಹತ್ತಿರ ಕೆಳಿದ್ದಾಳೆ, ಆದರೆ ರೇಣುಕಾ ಅವರನ್ನು ಕರೆದುಕೊಂಡು ಹೋಗದ ಕಾರಣ ದಂಪತಿಗಳು ಜಗಳವಾಡಿದ್ದಾರೆ ಎಂದು ತಿಳಿದುಬಂದಿದೆ.
ಗಂಡ ತನ್ನ ಹುಟ್ಟುಹಬ್ಬ ಮತ್ತು ವಾರ್ಷಿಕೋತ್ಸವದಂದು ದುಬಾರಿ ಉಡುಗೊರೆಗಳನ್ನು ನೀಡಲಿಲ್ಲ. ಕೆಲವು ಸಂಬಂಧಿಕರ ಹುಟ್ಟುಹಬ್ಬವನ್ನು ಆಚರಿಸಲು ದೆಹಲಿಗೆ ಹೋಗಬೇಕೆಂಬ ತನ್ನ ಆಸೆಗೆ ಪ್ರತಿಕ್ರಿಯೆಯನ್ನು ನೀಡದಿದ್ದಕ್ಕಾಗಿ ರೇಣುಕಾ ಕೂಡ ನಿಖಿಲ್ನೊಂದಿಗೆ ಅಸಮಾಧಾನಗೊಂಡಿದ್ದಳು. ಜಗಳದ ವೇಳೆ ರೇಣುಕಾ ನಿಖಿಲ್ನ ಮುಖಕ್ಕೆ ಗುದ್ದಿದ್ದಾಳೆ. ಗುದ್ದಿದ ರಭಸಕ್ಕೆ ನಿಖಿಲ್ನ ಮೂಗು ಮತ್ತು ಕೆಲವು ಹಲ್ಲುಗಳು ಮುರಿದಿವೆ. ತೀವ್ರ ರಕ್ತಸ್ರಾವದಿಂದ ನಿಖಿಲ್ ಪ್ರಜ್ಞೆ ಕಳೆದುಕೊಂಡಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ. ಏತನ್ಮಧ್ಯೆ, ಪೊಲೀಸರು ರೇಣುಕಾ ವಿರುದ್ಧ ಐಪಿಸಿ ಸೆಕ್ಷನ್ 302 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಮತ್ತು ಹೆಚ್ಚಿನ ತನಿಖೆಗಾಗಿ ಅವರನ್ನು ಬಂಧಿಸಿದ್ದಾರೆ.
You must be logged in to post a comment Login