LATEST NEWS
ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ, ಯುವತಿಗೆ ಚೂರಿ ಇರಿದು ಪರಾರಿ..!
ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಟೆಕ್ಕಿ ಯುವತಿಗೆ ಯುವಕನೋರ್ವ ವಂಚಿಸಿದ್ದು, ಮದುವೆಯಾಗುವಂತೆ ಒತ್ತಾಯಿಸಿದಾಗ ಯುವತಿಗೆ ಇರಿದು ಯುವಕ ಪರಾರಿಯಾಗಿದ್ದಾನೆ.
ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಖಾಸಗಿ ಕಂಪನಿಯೊಂದರಲ್ಲಿ ಟೆಕ್ಕಿಯಾದ್ದ 27 ವರ್ಷದ ಯುವತಿಗೆ ಜಿಮ್ ನಲ್ಲಿ ಆದಿತ್ಯ ಸಿಂಗ್ ಎಂಬ ಯುವಕನ ಪರಿಚಯವಾಗಿದೆ. ಬಳಿಕ ಇಬ್ಬರು ಲಿವಿಂಗ್ ರಿಲೇಷನ್ಶಿಪ್ನಲ್ಲಿದ್ದರು. ಹುಡುಗಿಯು ಆದಿತ್ಯನಿಗೆ ಎಲ್ಲವನ್ನೂ ಧಾರೆ ಎರೆದು ಕೊಟ್ಟಿದ್ದಳು. ಬಳಿಕ ಮದುವೆಯಾಗುವಂತೆ ಯುವತಿ ಕೇಳಿದ್ದಕ್ಕೆ ಆದಿತ್ಯ ಸಿಂಗ್ ನಿರಾಕರಿಸಿದ್ದಾನೆ. ಈ ಸಂದರ್ಭ ಮಾತಿಗೆ ಮಾತು ಬೆಳೆದು ಯುವತಿ ಮೇಲೆ ಆದಿತ್ಯ ಸಿಂಗ್ ಹಲ್ಲೆ ನಡೆಸಿ ಚಾಕುವಿನಿಂದ ಇರಿದು ಬಳಿಕ ಪರಾರಿಯಾಗಿದ್ದಾನೆ. ಈ ಕುರಿತು ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
You must be logged in to post a comment Login