Connect with us

    LATEST NEWS

    ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ನೇಣು ಬಿಗಿದು ಆತ್ಯಹತ್ಯೆ

    ಉಡುಪಿ ಮಾರ್ಚ್ 30: ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೊಬ್ಬರು ತಮ್ಮ ಪೊಲೀಸ್ ಕ್ವಾಟ್ರಸ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ.


    ಮೃತರನ್ನು ಬಾಗಲಕೋಟೆ ಮೂಲದ ಜ್ಯೋತಿ (28) ಎಂದು ಗುರುತಿಸಲಾಗಿದೆ. ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿ ರಾತ್ರಿ ಕ್ವಾಟ್ರಸ್ ಗೆ ಮರಳಿದ್ದ ಅವರು ಶನಿವಾರ ಬೆಳಿಗ್ಗೆ ನೇಣಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.

    ಮೃತ ಜ್ಯೋತಿಯವರ ಪತಿ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಯಾಗಿದ್ದು, ಅವರು ಬೆಳಿಗ್ಗೆ ಕರ್ತವ್ಯಕ್ಕೆ ಹೋಗಲೆಂದು ಹೊರಟಿದ್ದರು. ಈ ವೇಳೆ ಪತ್ನಿ ಜ್ಯೋತಿ ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ.
    ಕೂಡಲೇ ಅವರು ಪಕ್ಕದಲ್ಲಿರುವ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಹೋಗಿ ನೋಡಿದಾಗ ಮೃತಪಟ್ಟಿರುವ ವಿಚಾರ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ, ಡಿವೈಎಸ್ಪಿ ಅರವಿಂದ ಕಲಗುಜ್ಹಿ, ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
    Share Information
    Advertisement
    Click to comment

    You must be logged in to post a comment Login

    Leave a Reply