Connect with us

KARNATAKA

ಸೆಲ್ಫಿ ತೆಗೆಯಲು ಹೋಗಿ ನೀರುಪಾಲಾದ ಗೃಹಿಣಿ

ಮೈಸೂರು ಮೇ 07: ಕಪಿಲಾ ನದಿಯ ಸಮೀಪ ಸೆಲ್ಫಿ ತೆಗೆಯಲು ಹೋಗಿ ಗೃಹಿಣಿಯೊಬ್ಬಳು ನೀರು ಪಾಲಾದ ಘಟನೆ ಮೈಸೂರಿನ ಶ್ರೀ ಕ್ಷೇತ್ರ ಸಂಗಮ ಬಳಿ ನಡೆದಿದೆ.


ಮೃತರನ್ನು ಚಾಮರಾಜನಗರ ಜಿಲ್ಲೆ ನಂಜದೇವನಪುರ ಗ್ರಾಮದ ಗಿರೀಶ್ ಎಂಬುವರ ಪತ್ನಿ ಕವಿತಾ(38) ಎಂದು ಗುರುತಿಸಲಾಗಿದ್ದು, ಕವಿತಾ, ಪತಿ ಗಿರೀಶ್ ಹಾಗೂ ಪುತ್ರಿಯ ಜೊತೆಗೆ ನಂಜನಗೂಡು ತಾಲೂಕಿನ ಶ್ರೀ ಕ್ಷೇತ್ರ ಸಂಗಮಕ್ಕೆ ಪೂಜೆಗೆ ತೆರಳಿದ್ದರು. ದೇವಾಲಯದ ಪ್ರವೇಶಕ್ಕೂ ಮುನ್ನ ಕಪಿಲಾ ನದಿಯಲ್ಲಿ ಕಾಲು ತೊಳೆಯಲು ಹೋಗಿದ್ದರು. ಇದೇ ವೇಳೆ ಕವಿತಾ ಮೊಬೈಲ್‍ನಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಕಾಲು ಜಾರಿ ನೀರು ಪಾಲಾಗಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *