Connect with us

LATEST NEWS

ಉಡುಪಿ – ಬೆಂಗಳೂರಿಗೆ ಹೋಗುವುದಾಗಿ ಹೇಳಿದ ಮಹಿಳೆ ನಾಪತ್ತೆ

Share Information

ಉಡುಪಿ ಮೇ 27: ಬಹ್ರೇನ್‌ ನಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಮಹಿಳೆಯೊಬ್ಬರು ನಾಪತ್ತೆಯಾದ ಬಗ್ಗೆ ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


ನಾಪತ್ತೆಯಾದವರನ್ನು ಶುಭ ಕೆ (38) ಎಂದು ಗುರುತಿಸಲಾಗಿದ್ದು, ಜನವರಿ 3 ರಂದು ವಿದೇಶದಿಂದ ಬಂದ ಇವರು ಬಳಿಕ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ತೆರಳಿದ್ದಾರೆ. ಬಳಿಕ ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ ಎತ್ತರ, ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ಮರಾಠಿ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇನ್ನು ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್‌ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.


Share Information
Advertisement
Click to comment

You must be logged in to post a comment Login

Leave a Reply