Connect with us

    LATEST NEWS

    11 ತಿಂಗಳ ಮಗುವನ್ನು ಅನಾಥ ಮಾಡಿ ನೇಣಿಗೆ ಶರಣಾದ ಗೃಹಿಣಿ…!!

    ಮಂಗಳೂರು ಸೆಪ್ಬೆಂಬರ್ 12 : ವಿವಾಹಿತ ಮಹಿಳೆ ಎಂಬವರು ಫ್ಯಾನ್​​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ಹೊರವಲಯದ ಗುರುಪುರದ ಭಜನಾ ಮಂದಿರ ಸಮೀಪದಲ್ಲಿ ನಡೆದಿದೆ. ಗುರುಪುರದ ಭಜನಾ ಮಂದಿರ ಸಮೀಪದ ನಿವಾಸಿ ವಿವಾಹಿತೆ ಶಿಲ್ಪಾ (28) ಆತ್ಮಹತ್ಯೆಗೈದ ಮಹಿಳೆಯಾಗಿದ್ದಾಳೆ. ಈಕೆ ಬಜ್ಪೆ ಪೇಟೆಯ ಜ್ಯುವೆಲ್ಲರಿ ಅಂಗಡಿಯೊಂದರ ಮಾಲಕರೊಬ್ಬರ ಪುತ್ರಿಯಾಗಿದ್ದು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು.


    ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಊರಿಗೆ ಬಂದಿದ್ದ ಈಕೆ ‘ಮನೆಯಿಂದಲೇ ಕೆಲಸ’ ನಿರ್ವಹಿಸುತ್ತಿದ್ದರು. ಈಕೆಯ ಪತಿ ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದಾರೆ. ಈಕೆಗೆ 11 ತಿಂಗಳ ಮಗುವಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದು. ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಆತ್ಮಹ್ಯೆ ಮಾಡಿಕೊಂಡಿದ್ದಾರೆ. ಆದರೆ ಡೆತ್‌ನೋಟ್‌ನಲ್ಲಿನ ಮಾಹಿತಿಯು ಅಸ್ಪಷ್ಟತೆಯಿಂದ ಕೂಡಿದ್ದು ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ, ಬಜ್ಪೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply