Connect with us

    LATEST NEWS

    ಪ್ರಾಕೃತಿಕ ವೈಪರೀತ್ಯಗಳಿಗೆ ಮಾನವನೇ ಕಾರಣ- ಅನುರಾಧ

    ಪ್ರಾಕೃತಿಕ ವೈಪರೀತ್ಯಗಳಿಗೆ ಮಾನವನೇ ಕಾರಣ- ಅನುರಾಧ

    ಉಡುಪಿ, ಜೂನ್ 4: ಪ್ರಕೃತಿಯಲ್ಲಿ ಸಂಭವಿಸುತ್ತಿರುವ ಪ್ರಾಕೃತಿಕ ವೈಪರೀತ್ಯಗಳಿಗೆ, ಮಾನವನು ಪರಿಸರವನ್ನು ನಾಶ ಮಾಡುತ್ತಿರುವುದು ಮತ್ತು ಕಲುಷಿತಗೊಳಿಸುತ್ತಿರುವುದೇ ಪ್ರಮುಖ ಕಾರಣ ಎಂದು ಅಪರ ಜಿಲ್ಲಾಧಿಕಾರಿ ಅನುರಾಧ ಹೇಳಿದ್ದಾರೆ.

    ಅವರು ಸೋಮವಾರ ಮಲ್ಪೆ ಬೀಚ್ ನಲ್ಲಿ, ಜಿಲ್ಲಾಡಳಿತ, ನಗರಸಭೆ ಉಡುಪಿ, ಜಿಲ್ಲಾ ಪರಿಸರ ಇಲಾಖೆ, ಶಿಕ್ಷಣ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಮಲ್ಪೆ ಬೀಚ್ ಅಭಿವೃದ್ದಿ ಸಮಿತಿ ವತಿಯಿಂದ, ವಿಶ್ವ ಪರಿಸರ ದಿನಚಾರಣೆ ಅಂಗವಾಗಿ ನಡೆದ ಬೀಚ್ ಸ್ವಚ್ಛತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಮಾನವನು ಪರಿಸರವನ್ನು ಹಾಳು ಮಾಡುತ್ತಿರುವ ಕಾರಣ , ಪ್ರಾಕೃತಿಕ ವಿಕೋಪಗಳು ಕಂಡುಬರುತ್ತಿದ್ದು, ಜಾಗತಿಕ ವಾತಾವರಣ ಬಿಸಿಯಾಗುತ್ತಿರುವುದು, ಓಝೋನ್ ಪದರ ನಾಶವಾಗುತ್ತಿರುವುದು ಸಂಭವಿಸುತ್ತಿದೆ, ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು, ಹಸಿರು ಬೆಳೆಸುವ ಮೂಲಕ ಪರಿಸರವನ್ನು ಸಂರಕ್ಷಿಸಬೇಕಿದೆ, ಸಮುದ್ರದಲ್ಲಿ ತ್ಯಾಜ್ಯ ಬಿಸಾಡುವುದರಿಂದ ಅದನ್ನು ಸೇವಿಸುವ ಜಲರಾಶಿಗಳು ನಾಶವಾಗುತ್ತಿದ್ದು, ಜೈವಿಕ ಅಸಮತೋಲನ ಉಂಟಾಗುತ್ತಿದೆ ಆದ್ದರಿಂದ ಪರಿಸರವನ್ನು ಸಂರಕ್ಷಿಸುವ ಜೊತೆಗೆ ಸ್ವಚ್ಚತೆ ಕಾಪಾಡುವ ಕುರಿತಂತೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಅನುರಾಧ ಹೇಳಿದರು.

    ಕಾರ್ಯಕ್ರಮದಲ್ಲಿ ಮಾತನಾಡಿದ ನಗರಸಭೆ ಆಯುಕ್ತ ಜನಾರ್ಧನ್, ಉಡುಪಿ ನಗರಸಭಾ ವ್ಯಾಪ್ತಿಯ ಶಾಲೆಗಳಲ್ಲಿ ಪ್ಲಾಸ್ಟಿಕ್ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಏರ್ಪಡಿಸಲು ನಿರ್ಧರಿಸಿದ್ದು, ಆಯ್ದ ವಿದ್ಯಾರ್ಥಿಗಳನ್ನು ನಗರಸಭೆಯ ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿ ಕೇಂದ್ರಕ್ಕೆ ಕರೆದೊಯ್ದು, ಪ್ಲಾಸ್ಟಿಕ್ ವಿಲೇವಾರಿ ಸಮಸ್ಯೆ ಕುರಿತು ವೀಕ್ಷಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

    ಪ್ಲಾಸ್ಟಿಕ್ ತ್ಯಾಜ್ಯದಿಂದ ಜಲರಾಶಿಗಳುಗಳು ನಾಶವಾಗುವ ಕುರಿತು ರಚಿಸಿದ್ದ ಕಲಾಕೃತಿ , ಸಮುದ್ರದಲ್ಲಿ ತ್ಯಾಜ್ಯ ಎಸೆಯುವ ಕುರಿತು ಜಾಗೃತಿ ಮೂಡಿಸಿತು. ವಿವಿಧ ಶಾಲಾ ಮಕ್ಕಳಿಂದ ಬೀಚ್ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

    Share Information
    Advertisement
    Click to comment

    You must be logged in to post a comment Login

    Leave a Reply