Connect with us

    DAKSHINA KANNADA

    ಬಾಳುಗೋಡು ಮೀಸಲು ಅರಣ್ಯದಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಆನೆ ಸಾವು

    ಬಾಳುಗೋಡು ಮೀಸಲು ಅರಣ್ಯದಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಆನೆ ಸಾವು

    ಸುಬ್ರಹ್ಮಣ್ಯ ಮೇ 29: ಸುಬ್ರಹ್ಮಣ್ಯ ಸಮೀಪದ ಬಾಳುಗೋಡು ಮೀಸಲು ಅರಣ್ಯದಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾದ ಆನೆ ಸಾವನ್ನಪ್ಪಿದೆ. ಗಾಯಗೊಂಡ ಆನೆಯನ್ನು ಅರಣ್ಯ ಪ್ರದೇಶದಲ್ಲಿ ಗಮನಿಸಿದ ಸ್ಥಳೀಯರು ತಕ್ಷಣ ಈ ವಿಚಾರವನ್ನು ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

    ಆನೆಯ ಬಗ್ಗೆ ಉದಾಸೀನತೆಯನ್ನು ತೋರಿದ ಅರಣ್ಯ ಇಲಾಖಾಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಹಿನ್ನಲೆ ಅಧಿಕಾರಿಗಳು ಆನೆಗೆ ಚಿಕಿತ್ಸೆ ನೀಡಲು ನಾಗರಹೊಳೆಯಿಂದ ಅರಿವಳಿಕೆ ತಜ್ಞರನ್ನು ಕರೆಸಿ ಚಿಕಿತ್ಸೆ ನೀಡಿದ್ದರು.

    ಆ ಬಳಿಕದ ಘಟನೆಯಲ್ಲಿ ಗಾಯಗೊಂಡ ಆನೆಗೆ ಮತ್ತೊಂದು ಕಾಡಾನೆ ಹಲ್ಲೆ ಮಾಡಿತ್ತು. ತೀವೃವಾಗಿ ಗಾಯಗೊಂಡ ಆನೆಯ ಬಗ್ಗೆ ಯಾವುದೇ ಕಾಳಜಿ ವಹಿಸದ ಹಿನ್ನಲೆಯಲ್ಲಿ ಆನೆ ಇದೀಗ ಕಾಡಿನ ಮಧ್ಯೆಯೇ ಸಾವನ್ನಪ್ಪಿದೆ. ಅರಣ್ಯ ಇಲಾಖೆಯ ನಿರ್ಲಕ್ಷದಿಂದಲೇ ಈ ಘಟನೆ ಸಂಭವಿಸಿದೆ ಎನ್ನುವ ಆರೋಪವನ್ನು ಸ್ಥಳೀಯರು ಮಾಡಲಾರಂಭಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply