Connect with us

    LATEST NEWS

    ಬಿಜೆಪಿಯವರಿಗೆ ಆಡಳಿತದ ಅನುಭವ ಕಡಿಮೆ – ಯು.ಟಿ ಖಾದರ್

    ಬಿಜೆಪಿಯವರಿಗೆ ಆಡಳಿತದ ಅನುಭವ ಕಡಿಮೆ – ಯು.ಟಿ ಖಾದರ್

    ಮಂಗಳೂರು ಅಕ್ಟೋಬರ್ 8: ಬಿಜೆಪಿಯವರಿಗೆ ಆಡಳಿತದ ಅನುಭವ ಕಡಿಮೆ ಹೀಗಾಗಿ ಕಸಾಯಿಖಾನೆಗೆ ಅನುದಾನದ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಸಚಿವ ಯು.ಟಿ ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕುದ್ರೋಳಿಯಲ್ಲಿರುವ ಕಸಾಯಿಖಾನೆ ಬಹಳ ಹಳೆಯದಾಗಿದ್ದು, ಕಸಾಯಿಖಾನೆ ಅಭಿವೃದ್ಧಿಗೆ ಜನ ಬೇಡಿಕೆಯನ್ನಿಟ್ಟಿದ್ದರು. ಅಲ್ಲದೆ ಸ್ಮಾರ್ಟ್ ಸಿಟಿಯಿಂದ ಹಣ ಬರೋದು ಸ್ವಚ್ಛತೆಗಾಗಿ. ಹೀಗಾಗಿ ಘನ ತಾಜ್ಯ ನಿಯಂತ್ರಣ ಬರಬೇಕಾದರೆ ಕಸಾಯಿಖಾನೆಯ ಅಭಿವೃದ್ಧಿ ಆಗಲೇ ಬೇಕು ಎಂದು ಹೇಳಿದರು.

    ಈಗಾಗಲೇ ಈ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಹೋಗಿದ್ದು, ನನ್ನ ವಿರುದ್ಧ ಮಾತನಾಡಿದ ಎಲ್ಲಾ ಬಿಜೆಪಿ ನಾಯಕರು ಕೇಂದ್ರಕ್ಕೆ ಪತ್ರ ಬರೆದು ಅನುದಾನ ನಿಲ್ಲಿಸಲಿ ಎಂದು ಸವಾಲು ಹಾಕಿದರು. ಗೋಶಾಲೆಗಳಿಗೆ ಅನುದಾನ ನೀಡಲು ಕೇಂದ್ರಕ್ಕೆ ಪತ್ರ ಬರೆಯಲಿ. ಬಿಜೆಪಿಯವರು ಪತ್ರ ಬರೆಯುದಿಲ್ಲ ಎಂದರೆ ಛೀಮಾರಿ ಹಾಕುತ್ತಾರೆ ಎಂದು ಪತ್ರ ಬರೆಯುತ್ತಿಲ್ಲ. ಕೇಂದ್ರ ಅನುದಾನ ಕೊಟ್ಟರೆ ಗೋಶಾಲೆಗೆ ಎರಡು ಪಟ್ಟು ಜಾಸ್ತಿ ಹಣ ನೀಡುತ್ತೇವೆ ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply