LATEST NEWS
ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ಹೃದಯಾಘಾತದಿಂದ ನಿಧನ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಮಂಗಳೂರು ಜುಲೈ 05: : ಖ್ಯಾತ ಯಕ್ಷಗಾನ ಕಲಾವಿದ, ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯೊಂದರಲ್ಲೇ ಸುಮಾರು 4 ದಶಕಗಳಿಗೂ ಹೆಚ್ಚಿನ ತಿರುಗಾಟ ನಡೆಸಿದ ಕುಂಬ್ಳೆ ಶ್ರೀಧರ ರಾವ್ (76) ಶುಕ್ರವಾರ ಹೃದಯಾಘಾತದಿಂದ ನಿಧನರಾದರು.
ಮಾಲಿಂಗ ಮುಕಾರಿ ಮತ್ತು ಕಾವೇರಿ ದಂಪತಿಗಳಿಗೆ ಪುತ್ರನಾಗಿ ಶ್ರೀಧರ ರಾಯರು 1948ರ ಜುಲೈ 23ರಂದು ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ನಾಯ್ಕಾಪುವಿನಲ್ಲಿ ಜನಿಸಿದರು. 1962ರಲ್ಲಿ ಕಲ್ಲಾಡಿ ಕೊರಗ ಶೆಟ್ಟರ ಯಜಮಾನಿಕೆಯ ಕುಂಡಾವು ಮೇಳಕ್ಕೆ ಶ್ರೀಧರ ರಾಯರು ಬಾಲಕಲಾವಿದನಾಗಿ ಸೇರ್ಪಡೆಗೊಂಡರು. ಶ್ರೀಧರ ರಾವ್ ಉಪ್ಪಿನಂಗಡಿಯ ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆಯಲ್ಲಿ ವಾಸವಿದ್ದರು. ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ
ಇರಾ (ಕುಂಡಾವು), ಕೂಡ್ಲು, ಮೂಲ್ಕಿ, ಕರ್ನಾಟಕ ಮೇಳ ಮತ್ತು ಧರ್ಮಸ್ಥಳ ಮೇಳದಲ್ಲಿ ಯಕ್ಷ ವ್ಯವಸಾಯ ಮಾಡಿದವರು ಕುಂಬಳೆ ಶ್ರೀಧರ್ ರಾವ್ ಅವರು. ತೆ೦ಕುತಿಟ್ಟಿನ ಅಪ್ರತಿಮ ಸ್ತ್ರೀವೇಷಧಾರಿಯಾಗಿ ಕಲಾಸೇವೆ ಮಾಡಿರುವ ಅವರು ದಮಯಂತಿ, ದಾಕ್ಷಾಯಿಣಿ, ಅಮ್ಮು ಬಲ್ಲಾಳ್ತಿ, ಲಕ್ಷ್ಮಿ, ಸುಭದ್ರೆ, ಸತ್ಯಭಾಮೆ ಅಲ್ಲದೆ ಪ್ರಮೀಳೆ, ಶಶಿಪ್ರಭೆ ಮುಂತಾದ ಪಾತ್ರಗಳಿಂದ ದೊಡ್ಡ ಹೆಸರು ಮಾಡಿದವರು.
You must be logged in to post a comment Login