Connect with us

    LATEST NEWS

    ರಂಗಸ್ಥಳದಲ್ಲೇ ಕೊನೆಯುಸಿರೆಳೆದ ಯಕ್ಷಗಾನ ಕಲಾವಿದ

    ಉಡುಪಿ ಜನವರಿ 5 : ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ ರಂಗಸ್ಥಳದಲ್ಲೇ ವೇಷಧಾರಿಯಾಗಿರುವಾಗಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ.


    ಅವರಿಗೆ 58 ವರ್ಷ ವಯಸ್ಸಾಗಿತ್ತು. ಮೇಳದ ಪ್ರಧಾನ ವೇಷಧಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಾಧು ಕೊಠಾರಿ, ಶಿರಿಯಾರದ ಕಾಜ್ರಲ್ಲಿ ಸಮೀಪ ಕಲ್ಬೆಟ್ಟು ಎನ್ನುವಲ್ಲಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ‘ಮಹಾಕಲಿ‌ ಮಗದೇಂದ್ರ’ ಪ್ರಸಂಗದಲ್ಲಿ ಮಾಗಧನಾಗಿ ಪ್ರದರ್ಶನ ನೀಡುತ್ತಿದ್ದ ವೇಳೆ ರಂಗದಲ್ಲೇ ಹೃದಯ ನೋವಿನಿಂದ ಕುಸಿದುಬಿದ್ದರು.


    ತಕ್ಷಣ ವೇಷ ಕಳಚಿ ಪ್ರಧಾನ ಭಾಗವತ ಸದಾಶಿವ ಅಮೀನ್ ಹಾಗೂ ಮೇಳದ ಮ್ಯಾನೇಜರ್, ಕೊಠಾರಿ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯುವಾಗ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ
    ಕೊಠಾರಿ ಪ್ರಸ್ತುತ ಬಾರಕೂರಿನಲ್ಲಿ ಕುಟುಂಬದೊಂದಿಗೆ ನೆಲೆಸಿದ್ದರು. ಸುಮಾರು 40 ವರ್ಷಕ್ಕೂ ಹೆಚ್ಚು ಕಾಲ ಯಕ್ಷ ತಿರುಗಾಟ ನಡೆಸಿ, ಬಡಗುತಿಟ್ಟಿನ ಉತ್ತಮ ಕಲಾವಿದರಾಗಿ ಗುರುತಿಸಿಕೊಂಡಿದ್ದರು. ಸಾಧು ಅವರನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

    Share Information
    Advertisement
    Click to comment

    You must be logged in to post a comment Login

    Leave a Reply