Connect with us

LATEST NEWS

ವೇಣೂರು – ಬೈಕ್ ಓಮ್ನಿ ನಡುವೆ ಅಪಘಾತದಲ್ಲಿ ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ಸಾವು

ಮೂಡಬಿದಿರೆ ಜನವರಿ 20: ವೇಣೂರು ಸಮೀಪದ ಗಂಟಾಲ್ಕಟ್ಟೆಯಲ್ಲಿ ಮುಂಜಾನೆ ನಡೆದ ಅಪಘಾತದಲ್ಲಿ ಯಕ್ಷಗಾನ ಕಲಾವಿದರೊಬ್ಬರು ಸಾವನಪ್ಪಿರುವ ಘಟನೆ ನಡೆದಿದೆ.


ಮೃತರನ್ನು ಹಿರಿಯಡ್ಕ ಮೇಳದ ಮ್ಯಾನೇಜರ್, ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ಎಂದು ಗುರುತಿಸಲಾಗಿದೆ. ಅವರು ಯಕ್ಷಗಾನವನ್ನು ಮುಗಿಸಿ ಬೈಕ್ ನಲ್ಲಿ ಬರುತ್ತಿದ್ದ ಸಂದರ್ಭ ಎದುರಿನಿಂದ ಬರುತ್ತಿದ್ದ ಓಮ್ನಿ ವ್ಯಾನ್ ಪರಸ್ಪರ ಡಿಕ್ಕಿಯಾಗಿದ್ದು,

ವಾಮನಕುಮಾರ್ ದುರಂತ ಸಾವಿಗೀಡಾಗಿದ್ದಾರೆ. ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಬಂಧುಗಳನ್ನು, ಯಕ್ಷಗಾನ ಅಭಿಮಾನಿಗಳನ್ನು ಅಗಲಿದ್ದಾರೆ. ಸುಮಾರು 30 ವರ್ಷಗಳಿಂದ ಯಕ್ಷಗಾನ ರಂಗದಲ್ಲಿ ಕಲಾವಿದರಾಗಿರುವ ಅವರು, ಪುಂಡು ವೇಷ, ಸ್ತ್ರೀವೇಷಗಳಲ್ಲಿ ಖ್ಯಾತಿ ಗಳಿಸಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *