Connect with us

BANTWAL

ಯಕ್ಷಗಾನ ವನ್ನು ನಾವು ಇಲ್ಲಿ ಪೂಜೆ ಮಾಡುತ್ತೇವೆ ನಿನಗೆ ಗೊತ್ತುಂಟಾ? – ಯಕ್ಷಗಾನ ವೇಷಧಾರಿಗೆ ಕ್ಲಾಸ್ ತೆಗೆದುಕೊಂಡ ಹಿರಿಯ ಕಲಾವಿದ ಅಶೋಕ್ ಶೆಟ್ಟಿ ಸರಪಾಡಿ

ಬಂಟ್ವಾಳ ಅಕ್ಟೋಬರ್ 22 : ನವರಾತ್ರಿ ಸಂದರ್ಭದಲ್ಲಿ ಯಕ್ಷಗಾನ ವೇಷ ಧರಿಸಿ ರಸ್ತೆಯಲ್ಲಿ ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬನಿಗೆ ಹಿರಿಯ ಯಕ್ಷಗಾನ ಕಲಾವಿದ ಅಶೋಕ್ ಶೆಟ್ಟಿ ಸರಪಾಡಿ ತಡೆದು ನಿಲ್ಲಿಸಿ ವೇಷ ಕಳಚಿ ಕಳುಹಿಸಿದ ಘಟನೆ ನಡೆದಿದ್ದು, ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ದಾವಣಗೆರೆ ಮೂಲದ ವ್ಯಕ್ತಿ ಎಂದು ಹೇಳಲಾಗಿರುವ ಈತ ಶನಿವಾರ ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣ ಮಂದಿರದ ಬಳಿ ಯಕ್ಷಗಾನದ ವೇಷ ಹಾಕಿ ಹೋಗುತ್ತಿದ್ದ ಈ ವೇಳೆ ಆಗಮಿಸಿದ ಕಲಾವಿದ ಅಶೋಕ್ ‌ಶೆಟ್ಟಿ ಸರಪಾಡಿ ಅವರು ಯಕ್ಷಗಾನದ ವೇಷ ಹಾಕುವಂತಿಲ್ಲ,ಅದನ್ನು ತೆಗೆಯುವಂತೆ ಒತ್ತಾಯ ಮಾಡುವ ಬಗ್ಗೆ ವಿಡಿಯೋದಲ್ಲಿ ಕಂಡು ಬಂದಿದೆ. ಯಕ್ಷಗಾನ ವನ್ನು ನಾವು ಇಲ್ಲಿ ಪೂಜೆ ಮಾಡುತ್ತೇವೆ ನಿನಗೆ ಗೊತ್ತುಂಟಾ? ನೀನು ವೇಷು ಹಾಕಿ ಬಿಕ್ಷೆ ಬೇಡುತ್ತಿಯಾ ಎಂದು ಪ್ರಶ್ನಿಸಿದ್ದಾರೆ.

ನಾನು ತಪ್ಪು ಮಾಡಿದ್ದರೆ ನನಗೆ ಹೊಡೆಯಿರಿ ಎಂದು ವೇಷಧಾರಿ ಹೇಳಿದಾಗ ಹೊಡೆಯುವುದು ಅಲ್ಲ ವೇಷ ತೆಗೆಯದಿದ್ದಲ್ಲಿ ಕೈ ಕಾಲು ಮುರಿದು ಹಾಕುವಂತೆ ಬೆದರಿಸಿ,ಬೈದಿರುವ ವಿಡಿಯೋ ಇದೀಗ ವೈರಲ್ ಆಗಿದೆ. ವೇಷಧಾರಿಯ ವೇಷವನ್ನು ಕಳಚಿದ ಘಟನೆಯ ಬಗ್ಗೆ ವಿಡಿಯೋ ವೈರಲ್ ಆದ ಕೂಡಲೇ ಸಾರ್ವಜನಿಕ ವಲಯದಲ್ಲಿ ಪರವಿರೋಧದ ಚರ್ಚೆಗಳು ಆರಂಭವಾಗಿದೆ.

Share Information
Advertisement
Click to comment

You must be logged in to post a comment Login

Leave a Reply