ವಿಜಯಪುರ, ಫೆಬ್ರವರಿ 21 : ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಜಯಪುರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ವಿಜಯಪುರದಲ್ಲಿ ಮಾತನಾಡಿರುವ ಅವರು ಈ ಇಡೀ ಪ್ರಕರಣದ ಹಿಂದೆ ರಾಜಕೀಯ ಪ್ರೇರಿತ ಸಂಚು ಅಡಗಿದೆ. ಅವರನ್ನು ಸಿಲುಕಿಸಲೇಬೇಕು ಎಂಬ ಹಠದಿಂದ ಈ ಕಾರ್ಯಾಚರಣೆ ನಡೆಸಿದಂತೆ ಕಾಣುತ್ತಿದ್ದು, ಬಂಜಾರ ಸಮಾಜದ ಉದಯೋನ್ಮುಖ ನಾಯಕನನ್ನು ಹತ್ತಿಕ್ಕುವ ಉದ್ದೇಶದಿಂದ ಈ ಟ್ರ್ಯಾಪ್ ಮಾಡಲಾಗಿದೆ ಅನ್ನುವ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ.
ಚಂದ್ರು ಲಮಾಣಿ ಅವರು ಒಬ್ಬ ಒಳ್ಳೆಯ ವೈದ್ಯರು ಹಾಗೂ ಉತ್ತಮ ಮನುಷ್ಯ. ಅವರು ಕೇವಲ ಎರಡು-ಮೂರು ಲಕ್ಷ ರೂಪಾಯಿಗಾಗಿ ಕೈವೊಡ್ಡುವಂತಹ ಸಣ್ಣ ವ್ಯಕ್ತಿತ್ವದ ಮನುಷ್ಯ ಅಲ್ಲವೇ ಅಲ್ಲ,” ಎಂದಿದ್ದಾರೆ.