Connect with us

DAKSHINA KANNADA

ಎತ್ತಿನಹೊಳೆ ಯೋಜನೆ Out dated subject – ಮಾಜಿ ಸಿಎಂ ವೀರಪ್ಪ ಮೊಯಿಲಿ..! 

ಎತ್ತಿನಹೊಳೆ ಯೋಜನೆಯೊಂದು Out dated subject ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಹೇಳಿದ್ದಾರೆ.

ಮಂಗಳೂರು : ಎತ್ತಿನಹೊಳೆ ಯೋಜನೆಯೊಂದು Out dated subject ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಹೇಳಿದ್ದಾರೆ.

ಮಂಗಳೂರಿನ ಕಾಂಗ್ರೇಸ್ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ಎತ್ತಿನಹೊಳೆಯೊಂದು ಮುಗಿದ ಅಧ್ಯಾಯ. ಹಳೆ ವಿಚಾರವನ್ನು ಮತ್ತೆ ಮತ್ತೆ ಕೇಳಬೇಡಿ ಎಂದು ಪತ್ರಕರ್ತರಿಗೆ ಮನವಿ ಮಾಡಿದರು.

ಎತ್ತಿನಹೊಳೆ ಯೋಜನೆಯನ್ನು ತರಾತುರಿಯಲ್ಲಿ ಮಾಡಿದ್ದು, 20 ಸಾವಿರ ಕೋಟಿ ರೂಪಾಯಿ ಖರ್ಚು ಮಾಡಿದರೂ,ಒಂದೇ ಹನಿ ನೀರು ಹರಿಸಲು ಯಾಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ತಡಕಾಡಿದ ಮೊಯ್ಲಿ ಎತ್ತಿನಹೊಳೆ ಯೋಜನೆ ಬಗ್ಗೆ ನಾನು ಎಲ್ಲಿ ಉತ್ತರ ಬೇಕೋ ಅಲ್ಲೇ ಕೊಡುತ್ತೇನೆ ಎಂದರು.

ಎತ್ತಿನಹೊಳೆ ಯೋಜನೆಯನ್ನು ಕಾಂಗ್ರೆಸ್ ಆರಂಭಿಸಿದ್ದರೂ, ಬಿಜೆಪಿಯವರೂ ಅದನ್ನು ಮುಂದುವರಿಸಿದ್ದಾರೆ.

ಈ ನಾವು ಯಾಕೆ ಅದನ್ನು ನಿಲ್ಲಿಸಬೇಕು ಎಂದ ಅವರು ನೇತ್ರಾವತಿ ನದಿಯಲ್ಲಿ ನೀರಿಲ್ಲ ಎಂದು ನೀವೇ ಹೇಳ್ತೀರ.

ನೀರು ಹರಿದಿಲ್ಲ ಅಂದ್ರೆ ನೀರು ಹೇಗೆ ಖಾಲಿಯಾಗುತ್ತೆ ಎಂದು ಪ್ರಶ್ನಿಸಿದ ಅವರು ನಾನು ಚಿಕ್ಕಬಳ್ಳಾಪುರ ದಿಂದ ಮತ್ತೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದಿದ್ದಾರೆ.

 

Share Information
Advertisement
Click to comment

You must be logged in to post a comment Login

Leave a Reply