DAKSHINA KANNADA
ಪುತ್ತೂರಿಗೆ ಯೋಗಿ ಆದಿತ್ಯನಾಥ್ ಎಂಟ್ರಿ..!
ಪುತ್ತೂರು, ಮೇ 06: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ಹಿನ್ನಲೆ ಪುತ್ತೂರು ವಿಧಾನ ಸಭಾ ಕ್ಷೇತ್ರ ರಂಗೇರುತ್ತಿದೆ.
ಇಂದು ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಚಾರ ನಡೆಸಲಿದ್ದಾರೆ. ಯೋಗಿ ಆದಿತ್ಯನಾಥ್ ಭೇಟಿ ಹಿನ್ನಲೆಯಲ್ಲಿ ಪುತ್ತೂರು ನಗರದಾದ್ಯಂತ ಪೋಲೀಸ್ ಸರ್ಪಗಾವಲು ಇದ್ದು, ರಾಜ್ಯ ಪೋಲೀಸ್ ಮತ್ತು ಕೇಂದ್ರ ಮೀಸಲು ಪಡೆಯಿಂದ ಬಂದೋಬಸ್ತ್ ಮಾಡಲಾಗಿದೆ.
ನಗರದ ಮುಖ್ಯ ರಸ್ತೆಯಲ್ಲಿ ಯೋಗಿ ರೋಡ್ ಶೋ ನಡೆಯಲಿದ್ದು, ಪ್ರಧಾನ ಅಂಚೆ ಕಛೇರಿಯಿಂದ ಮಾರುಕಟ್ಟೆ ರಸ್ತೆಯಲ್ಲಿ ರೋಡ್ ಶೋ ನಡೆಸಲಿದೆ. ರೋಡ್ ಶೋ ಬಳಿಕ ಕಿಲ್ಲೆ ಮೈದಾನದಲ್ಲಿ ಕಾರ್ಯಕರ್ತರನ್ನು ಉದ್ಧೇಶಿಸಿ ಯೋಗಿ ಮಾತನಾಡಲಿದ್ದಾರೆ.
ರೋಡ್ ಶೋ ಮೊದಲು ಇತಿಹಾಸ ಪ್ರಸಿದ್ಧ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಯೋಗಿ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಸುಮಾರು 15 ರಿಂದ 20 ಸಾವಿರ ಜನ ಸೇರಲಿರುವ ಸಾಧ್ಯತೆ ಇದೆ ಎನ್ನಲಾಗಿದೆ.
You must be logged in to post a comment Login