Connect with us

    LATEST NEWS

    ಜನರಕ್ಷಾ ಯಾತ್ರೆಯಲ್ಲಿ ಯೋಗಿ ಆದಿತ್ಯನಾಥ್

    ಜನರಕ್ಷಾ ಯಾತ್ರೆಯಲ್ಲಿ ಯೋಗಿ ಆದಿತ್ಯನಾಥ್

    ಮಂಗಳೂರು ಅಕ್ಟೋಬರ್ 4: ಕೇರಳದಲ್ಲಿ ನಡೆಯುತ್ತಿರುವ ಜನರಕ್ಷಾ ಯಾತ್ರೆಯಲ್ಲಿ ಇಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿನ್ನೆ ತಡರಾತ್ರಿ ಮಂಗಳೂರಿನ‌ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

    ಲಕ್ನೋದಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣದಲ್ಲಿಳಿದ ಯೋಗಿ ಆದಿತ್ಯನಾಥ್ ರನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

    ಮಂಗಳೂರಿನಿಂದ ರಾತ್ರಿಯೇ ಕೇರಳಕ್ಕೆ ತೆರಳಿರುವ ಯೋಗಿ ಆದಿತ್ಯನಾಥ ಇಂದು ಕಣ್ಣೂರಿನಲ್ಲಿ ಜನರಕ್ಷಾ rally ಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಕ್ಟೋಬರ್ 17 ರ ತನಕ ಬಿಜೆಪಿಯ ಜನರಕ್ಷಾ ಪಾದಯಾತ್ರೆ ನಡೆಯಲಿದ್ದು ತಿರುವನಂತಪುರಂ ನಲ್ಲಿ ಸಮಾರೋಪ ನಡೆಯಲಿದೆ. ಪ್ರತಿದಿನವೂ ಪ್ರಮುಖ ನಾಯಕರು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದು ಕಾರ್ಯಕರ್ತರಿಗೆ ಹುರುಪು ತುಂಬಲಿದ್ದಾರೆ.

    ವಿಡಿಯೋಗಾಗಿ…

    Share Information
    Advertisement
    Click to comment

    You must be logged in to post a comment Login

    Leave a Reply