Connect with us

    KARNATAKA

    ಯುವ ಬಾಡಿಬಿಲ್ಡರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

    ಬೆಂಗಳೂರು, ಜನವರಿ 11: ಸಿಲಿಕಾನ್ ಸಿಟಿಯಲ್ಲಿ ಯುವ ದೇಹದಾಢ್ಯ ಪಟು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೆ ಆರ್ ಪುರಂ  ಬಳಿಯ ಹೀರಂಡಹಳ್ಳಿಯಲ್ಲಿ ಶ್ರೀನಾಥ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

    ಮೂಲತಃ ಕೋಲಾರದ ಶ್ರೀನಿವಾಸಪುರದ ಶ್ರೀನಾಥ್, ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಫಾರ್ಮಾ ಡಿ ಓದುತ್ತಿದ್ದರು. ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದರು. ಆದರೆ ತಾವು ವಾಸವಿದ್ದ ಕೊಠಡಿಯಲ್ಲಿ ಮಂಗಳವಾರ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ದೊರೆತಿದ್ದಾರೆ.

    ಇದೀಗ ಶ್ರೀನಾಥ್ ಪೋಷಕರು ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಈ ಸಂಬಂಧ ಅವಲಹಳ್ಳಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply