Connect with us

KARNATAKA

ಕಾಸರಗೋಡು ಮೂಲದ ಯುವ ಉದ್ಯಮಿ ಮುಂಬೈ ರಸ್ತೆ ಅಪಘಾತಕ್ಕೆಬಲಿ..!

ಕಾಸರಗೋಡು : ಕಾಸರಗೋಡು ಮೂಲದ ಉದ್ಯಮಿ ಮುಂಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದಾರುಣ ಅಂತ್ಯ ಕಂಡಿದ್ದಾರೆ. ಕಾಸರಗೋಡು ಕಯ್ಯಾರ್ ಚನ್ನಿಕುಡೇಲ್ ನ ದಿವಂಗತ ಮಾರ್ಸೆಲ್ ಮತ್ತು ಲೀನಾ ಕ್ರಾಸ್ತಾ ದಂಪತಿಯ ಪುತ್ರ ರೂಬನ್ ಚಾರ್ಲ್ಸ್ ಕ್ರಾಸ್ತಾ (39) ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಮುಂಬೈನಲ್ಲಿ ಉದ್ಯಮಿಯಾಗಿದ್ದ ರೂಬನ್ ಶುಕ್ರವಾರ ಸಂಜೆ ಬೈಕಿನಲ್ಲಿ ಸಂಚರಿಸುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿ ಈ ಅಫಘಾತ ಸಂಭವಿಸಿದೆ. ರಸ್ತೆಗೆ ಬಿದ್ದ ರೂಬನ್ ಅವರ ಮೇಲೆ ಲಾರಿಯೊಂದು ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ರೂಬನ್ ಕಳೆದ 23 ವರ್ಷಗಳಿಂದ ಮುಂಬೈಯಲ್ಲಿ ಉದ್ಯಮ ನಡೆಸುತ್ತಿದ್ದು, ಮೂರು ತಿಂಗಳ ಹಿಂದೆಯಷ್ಟೇ ಊರಿಗೆ ಬಂದು ಮರಳಿದ್ದರು. ಮೃತ ರೂಬನ್ ಪತ್ನಿ, ಪುತ್ರಿ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ರೂಬನ್ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ತರಲಾಗುತ್ತಿದ್ದು, ಫೆ.25ರ ಭಾನುವಾರ ಸಂಜೆ 4 ಗಂಟೆಗೆ ಕಯ್ಯಾರ್ ಕ್ರಿಸ್ತರಾಜ ದೇವಾಲಯದ ಸ್ಮಶಾನ ಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *