LATEST NEWS
ಮೇಲ್ಛಾವಣೆಯಿಂದ ಕೆಳಗೆ ಬಿದ್ದು ಯುವಕ ಸಾವು
ಮಂಗಳೂರು ಜನವರಿ 28: ವರ್ಕಶಾಪ್ ಅದರ ಮೇಲ್ಛಾವಣೆಯಿಂದ ಬಿದ್ದ ಪರಿಣಾಮ ಯುವಕನೋರ್ವ್ ಮೃತಪಟ್ಟ ಘಟನೆ ಬೈಕಂಪಾಡಿಯ ಕೈಗಾರಿಕಾ ಪ್ರದೇಶದಲ್ಲಿ ಗುರುವಾರ ಸಂಭವಿಸಿದೆ.
ಮೃತರನ್ನು ಎಕ್ಕೂರುಗುಡ್ಡೆ ನಿವಾಸಿ ವರುಣ್(25) ಎಂದು ಗುರುತಿಸಲಾಗಿದ್ದು, ಗುರುವಾರ ಸಂಜೆ 5 ಗಂಟೆಯ ಸುಮಾರಿಗೆ ವರ್ಕ್ಶಾಪ್ನ ಮೇಲ್ಛಾವಣಿಯ ಶೀಟ್ ಮೇಲೆ ಸೋಲಾರ್ ಪ್ಯಾನಲ್ಗೆ ವಯರಿಂಗ್ ಮತ್ತು ಪ್ಲಂಬಿಂಗ್ ಕೆಲಸ ಮಾಡುತ್ತಿದ್ದರು. ಈ ವೇಳೆ ಶೀಟ್ ತುಂಡಾಗಿ ವರುಣ್ ಅವರು ಕೆಳಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮೃತಪಟ್ಟಿದ್ದಾರೆ. ವರುಣ್ ಅವರು ತಾಯಿ ಮತ್ತು ಇಬ್ಬರು ತಮ್ಮಂದಿರೊಂದಿಗೆ ವಾಸವಾಗಿದ್ದರು. ಓರ್ವ ತಮ್ಮ ಬೇಕರಿ ಕೆಲಸಕ್ಕೆ ಹೋಗುತ್ತಿದ್ದು ಇನ್ನೋರ್ವ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ವರುಣ್ ಬಿಜೆಪಿಯ ಎಕ್ಕೂರು ಬೂತ್ ಕಾರ್ಯದರ್ಶಿಯಾಗಿಯೂ ಕ್ರಿಯಾಶೀಲರಾಗಿದ್ದರು.
You must be logged in to post a comment Login