LATEST NEWS
ಉಡುಪಿ ಸಿಡಿಲಿಗೆ ಯುವಕ ಬಲಿ
ಉಡುಪಿ ಸಿಡಿಲಿಗೆ ಯುವಕ ಬಲಿ
ಉಡುಪಿ: ಅಂಫನಾ ಚಂಡಮಾರುತಕ್ಕೆ ಕರಾವಳಿ ಭಾರಿ ಮಳೆ ಸುರಿಯುತ್ತಿದ್ದು ನಿನ್ನೆ ರಾತ್ರಿ ಉಡುಪಿಯಲ್ಲಿ ಭಾರೀ ಗುಡುಗು ಸಹಿತ ಮಳೆಯಾಗಿದ್ದು, ಪರಿಣಾಮ ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ಕಾಪು ತಾಲೂಕಿನ ಕಟಪಾಡಿ ಏಣಗುಡ್ಡೆಯಲ್ಲಿ ಈ ಘಟನೆ ನಡೆದಿದೆ.
ಮೃತಪಟ್ಟ ಯುವಕನನ್ನು ಕಟಪಾಡಿ ಏಣಗುಡ್ಡೆ ನಿವಾಸಿ ಭರತ್ (22) ಎಂದು ಗುರುತಿಸಲಾಗಿದೆ. ಮೃತ ಭರತ್ ಸಿಡಿಲು ಸಹಿತ ಮಳೆ ಬರುವಾಗ ಮನೆಯಲ್ಲಿ ಕುಳಿತಿದ್ದನು. ಆದರೂ ಸಿಡಿಲು ಬಡಿದು ಯುವಕ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನ ಮನೆಯವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತ ಭರತ್ ಕೊನೆಯುಸಿರೆಳೆದಿದ್ದಾರೆ.
You must be logged in to post a comment Login