Connect with us

LATEST NEWS

ಕಿರಿಮಂಜೇಶ್ವರ – ರೈಲ್ವೆ ಹಳಿ ದಾಟುವ ವೇಳೆ ರೈಲು ಡಿಕ್ಕಿ ಹೊಡೆದು ಯುವಕ ಸಾವು

ಕುಂದಾಪುರ ಫೆಬ್ರವರಿ 05: ರೈಲು ಹಳಿ ದಾಟುತ್ತಿರುವ ವೇಳೆ ರೈಲು ಡಿಕ್ಕಿಯಾಗಿ ಯುವಕನೊಬ್ಬ ಸಾವನಪ್ಪಿದ ಘಟನೆ ಕಿರಿಮಂಜೆಶ್ವರ ಗ್ರಾಮದ ನಾಗೂರು ಶೆಟ್ರಹಿತ್ಲು ಎಂಬಲ್ಲಿ ನಡೆದಿದೆ. ಮೃತನನ್ನು ಬಿಜೂರು ಗ್ರಾಮದ ದಿಟಿಮನೆ ನಿವಾಸಿ ಮುತ್ತಯ್ಯ ದೇವಾಡಿಗ ಪುತ್ರ ವಾಸುದೇವ ದೇವಾಡಿಗ (25) ಎಂದು ಗುರುತಿಸಲಾಗಿದೆ.


ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದ ವಾಸುದೇವ ಕಲ್ಲಂಗಡಿ ರೈಲ್ವೆ ಹಳಿಯ ಇನ್ನೊಂದು ಬದಿಯ ಗದ್ದೆಯಲ್ಲಿ ಕಲ್ಲಂಗಡಿ ಬೆಳೆಸಿದ್ದರು. ನಾಗೂರಿನಲ್ಲಿ ತನ್ನ ಸೆಂಟ್ರಿಂಗ್ ಕೆಲಸ ಮುಗಿಸಿ ಕಲ್ಲಂಗಡಿ ಹಣ್ಣುಗಳ ಲೋಡ್ ಮಾಡುತ್ತಿದ್ದ ಕಾರ್ಮಿಕರ ಜೊತೆ ಮಾತನಾಡಿದ ರೈಲ್ವೆ ಹಳಿಗಳನ್ನು ದಾಟುವ ವೇಳೆ ಮಂಗಳೂರು ಕಡೆಯಿಂದ ಮಡಗಾಂವ್ ಗೆ ತೆರಳುತ್ತಿದ ರೈಲು ಡಿಕ್ಕಿ ಹೊಡೆದಿದೆ.
ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *