ಬಂಟ್ವಾಳ ಸೆಪ್ಟೆಂಬರ್ 21: ನೀರು ತುಂಬಿದ್ದ ಹೊಂಡಕ್ಕೆ ಯುವಕನೊಬ್ಬ ಕಾಲುಜಾರಿ ಬಿದ್ದು ಸಾವನಪ್ಪಿದ ಘಟನೆ ಶನಿವಾರ ಸಜೀಪದ ಕಂಚಿನಡ್ಕಪದವು ಎಂಬಲ್ಲಿ ನಡೆದಿದೆ. ಮೃತರನ್ನು ಉಳ್ಳಾಲ ತಾಲೂಕಿನ ಇರಾ ಸಮೀಪದ ಸೂತ್ರಬೈಲು ನಿವಾಸಿ ಅಬ್ದುಲ್ ಅಮೀರ್ (23) ಎಂದು ಗುರುತಿಸಲಾಗಿದೆ.


ಅಮೀರ್ ಕೂಲಿ ಕೆಲಸ‌ ಮಾಡಿಕೊಂಡಿದ್ದು, ಸೆಪ್ಟೆಂಬರ್ 20ರಂದು ಸಂಜೆ ಗೆಳೆಯರ ಜೊತೆ ಸಜೀಪಮೂಡ ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಕೆಲಸಕ್ಕೆ ಹೋಗಿದ್ದು, ಸಂಜೆ ಕೆಲಸ ಮುಗಿಸಿ ಅಲ್ಲೇ ಸಮೀಪದಲ್ಲಿದ್ದ ನೀರು ತುಂಬಿದ್ದ ಹೊಂಡಕ್ಕೆ ಕೈಕಾಲು ಮುಖ ತೊಳೆಯಲು ಹೋದ ವೇಳೆ ಘಟನೆ ನಡೆದಿದೆ.

ಮಂಗಳೂರು: ಹಿಂದೂ ಉಪಜಾತಿಗಳಲ್ಲಿ ಕ್ರಿಶ್ಚಿಯನ್ ಪದ ಬಳಕೆ ಕೈಬಿಡದಿದ್ದಲ್ಲಿ ಜಾತಿ ಜನಗಣತಿ ಬಹಿಷ್ಕಾರ

ನೀರಿಗೆ ಬಿದ್ದು ಗಂಭೀರ ಸ್ಥಿತಿಯಲ್ಲಿದ್ದ ಅಮೀರ್ ನನ್ನು ಕೂಡಲೇ ದೇರಳಕಟ್ಟೆಯ ಆಸ್ಪತ್ರೆಗೆ ಸೇರಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು. ‌‌ಘಟನೆಯ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Information